ಗುರುವಾರ ನಡೆದ ಮಂಡಳಿಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ‘ಒತ್ತುವರಿಯಾಗಿರುವ ಆಸ್ತಿಗಳನ್ನು ಹೇಗೆ ವಾಪಸ್ ಪಡೆದು ಬಳಸಿಕೊಳ್ಳಬಹುದು ಎನ್ನುವುದರ ಕುರಿತು ಸಲಹೆಗಳನ್ನು ಸ್ವೀಕರಿಸಲು ಸಮಿತಿಯೊಂದನ್ನು ರಚಿಸಲಾಗುವುದು. ಇದರಲ್ಲಿ ಅಧಿಕಾರಿಗಳು, ಭಕ್ತರು, ಧಾರ್ಮಿಕ ಸಂಘಸಂಸ್ಥೆಗಳ ಮುಖ್ಯಸ್ಥರು ಇರಲಿದ್ದಾರೆ’ ಎಂದು ಮಂಡಳಿ ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿ ತಿಳಿಸಿದರು.