<p><strong>ತಿರುಪತಿ</strong>: ಆಂಧ್ರಪ್ರದೇಶ, ತಮಿಳುನಾಡು ಹಾಗೂ ಉತ್ತರಾಖಂಡದ ಹೃಷಿಕೇಶದಲ್ಲಿರುವ ಒಟ್ಟು 50 ಸ್ಥಿರಾಸ್ತಿಗಳನ್ನು ಹರಾಜು ಹಾಕಲು ತಿರುಮಲ ತಿರುಪತಿ ದೇಸಸ್ಥಾನ (ಟಿಟಿಡಿ) ಆಡಳಿತ ಮಂಡಳಿ ನಿರ್ಧರಿಸಿದೆ.</p>.<p>‘ಹರಕೆ ತೀರಿಸಲು ಹಾಗೂ ವಿವಿಧ ಸಂದರ್ಭಗಳಲ್ಲಿ ಭಕ್ತರು ದೇವಸ್ಥಾನಕ್ಕೆ ಹಲವು ದಶಕಗಳ ಹಿಂದೆ ಈ ಸ್ಥಿರಾಸ್ತಿಗಳನ್ನು ನೀಡಿದ್ದಾರೆ. ಇವುಗಳಿಂದ ಈಗ ದೇವಸ್ಥಾನಕ್ಕೆ ಯಾವುದೇ ಆದಾಯ ಸಿಗುತ್ತಿಲ್ಲ. ಅವುಗಳ ನಿರ್ವಹಣೆಯೂ ಕಷ್ಟ. ಹೀಗಾಗಿ ಹರಾಜು ಹಾಕುವ ನಿರ್ಧಾರಕ್ಕೆ ಬರಲಾಗಿದೆ’ ಎಂದು ಟಿಟಿಡಿ ಮಂಡಳಿಯ ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿ ಭಾನುವಾರ ತಿಳಿಸಿದ್ದಾರೆ.</p>.<p>‘ಆಂಧ್ರಪ್ರದೇಶದಲ್ಲಿ 26, ತಮಿಳುನಾಡಿನಲ್ಲಿ 23 ಹಾಗೂ ಹೃಷಿಕೇಶದಲ್ಲಿ 1 ಸೇರಿದಂತೆ 50 ಸ್ಥಿರಾಸ್ತಿಗಳಿವೆ. 1ರಿಂದ 5 ಸೆಂಟ್, ಎಕರೆಯಷ್ಟು ವಿಸ್ತೀರ್ಣ ಹೊಂದಿರುವ ಜಮೀನುಗಳಿವೆ. ನಿವೇಶನಗಳೂ ಇವೆ. ಇವುಗಳ ಹರಾಜಿನಿಂದ ₹ 24 ಕೋಟಿ ಆದಾಯ ಬರುವ ನಿರೀಕ್ಷೆ ಇದೆ’ ಎಂದು ಅವರು ಹೇಳಿದ್ದಾರೆ.</p>.<p>‘ಸ್ಥಿರಾಸ್ತಿಗಳ ಹರಾಜಿನ ಬಗ್ಗೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅಪಪ್ರಚಾರ ನಡೆಸಿವೆ. ಈ ಹಿಂದೆಯೂ ಟಿಟಿಡಿ ಹಲವಾರು ಸಂದರ್ಭಗಳಲ್ಲಿ ಸ್ಥಿರಾಸ್ತಿಗಳನ್ನು ಹರಾಜು ಹಾಕಿದೆ. ಹೀಗಾಗಿ ಭಕ್ತರು ಗೊಂದಲಕ್ಕೆ ಒಳಗಾಗಬಾರದು’ ಎಂದೂ ಅವರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುಪತಿ</strong>: ಆಂಧ್ರಪ್ರದೇಶ, ತಮಿಳುನಾಡು ಹಾಗೂ ಉತ್ತರಾಖಂಡದ ಹೃಷಿಕೇಶದಲ್ಲಿರುವ ಒಟ್ಟು 50 ಸ್ಥಿರಾಸ್ತಿಗಳನ್ನು ಹರಾಜು ಹಾಕಲು ತಿರುಮಲ ತಿರುಪತಿ ದೇಸಸ್ಥಾನ (ಟಿಟಿಡಿ) ಆಡಳಿತ ಮಂಡಳಿ ನಿರ್ಧರಿಸಿದೆ.</p>.<p>‘ಹರಕೆ ತೀರಿಸಲು ಹಾಗೂ ವಿವಿಧ ಸಂದರ್ಭಗಳಲ್ಲಿ ಭಕ್ತರು ದೇವಸ್ಥಾನಕ್ಕೆ ಹಲವು ದಶಕಗಳ ಹಿಂದೆ ಈ ಸ್ಥಿರಾಸ್ತಿಗಳನ್ನು ನೀಡಿದ್ದಾರೆ. ಇವುಗಳಿಂದ ಈಗ ದೇವಸ್ಥಾನಕ್ಕೆ ಯಾವುದೇ ಆದಾಯ ಸಿಗುತ್ತಿಲ್ಲ. ಅವುಗಳ ನಿರ್ವಹಣೆಯೂ ಕಷ್ಟ. ಹೀಗಾಗಿ ಹರಾಜು ಹಾಕುವ ನಿರ್ಧಾರಕ್ಕೆ ಬರಲಾಗಿದೆ’ ಎಂದು ಟಿಟಿಡಿ ಮಂಡಳಿಯ ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿ ಭಾನುವಾರ ತಿಳಿಸಿದ್ದಾರೆ.</p>.<p>‘ಆಂಧ್ರಪ್ರದೇಶದಲ್ಲಿ 26, ತಮಿಳುನಾಡಿನಲ್ಲಿ 23 ಹಾಗೂ ಹೃಷಿಕೇಶದಲ್ಲಿ 1 ಸೇರಿದಂತೆ 50 ಸ್ಥಿರಾಸ್ತಿಗಳಿವೆ. 1ರಿಂದ 5 ಸೆಂಟ್, ಎಕರೆಯಷ್ಟು ವಿಸ್ತೀರ್ಣ ಹೊಂದಿರುವ ಜಮೀನುಗಳಿವೆ. ನಿವೇಶನಗಳೂ ಇವೆ. ಇವುಗಳ ಹರಾಜಿನಿಂದ ₹ 24 ಕೋಟಿ ಆದಾಯ ಬರುವ ನಿರೀಕ್ಷೆ ಇದೆ’ ಎಂದು ಅವರು ಹೇಳಿದ್ದಾರೆ.</p>.<p>‘ಸ್ಥಿರಾಸ್ತಿಗಳ ಹರಾಜಿನ ಬಗ್ಗೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅಪಪ್ರಚಾರ ನಡೆಸಿವೆ. ಈ ಹಿಂದೆಯೂ ಟಿಟಿಡಿ ಹಲವಾರು ಸಂದರ್ಭಗಳಲ್ಲಿ ಸ್ಥಿರಾಸ್ತಿಗಳನ್ನು ಹರಾಜು ಹಾಕಿದೆ. ಹೀಗಾಗಿ ಭಕ್ತರು ಗೊಂದಲಕ್ಕೆ ಒಳಗಾಗಬಾರದು’ ಎಂದೂ ಅವರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>