<p><strong>ಜೈಪುರ:</strong> ‘ಟೆಲಿವಿಷನ್ ಮತ್ತು ಮೊಬೈಲ್ ಬರುವುದಕ್ಕೂ ಮುಂಚೆ ಯಾವುದೇ ಅತ್ಯಾಚಾರ ನಡೆದಿಲ್ಲ’ ಎಂದು ರಾಜಸ್ಥಾನ ಕಾಂಗ್ರೆಸ್ ಸಚಿವ ಬನ್ವರ್ಲಾಲ್ ಮೇಘವಾಲ ಗುರುವಾರ ಹೇಳಿದ್ದಾರೆ.</p>.<p>ಹೆಚ್ಚುತ್ತಿರುವ ಅಪರಾಧಗಳ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಟೆಲಿವಿಷನ್ ಮತ್ತು ಅಂತರ್ಜಾಲದಲ್ಲಿ ಬರುವ ಎಲ್ಲಾ ವಿಷಯಗಳನ್ನು ಗಮನಿಸುವ ಈಗಿನ ಯುವಜನತೆ ತಪ್ಪುದಾರಿಯತ್ತಾ ಸಾಗುತ್ತಿದ್ದಾರೆ. ಅದಕ್ಕಾಗಿಯೇ ಅಪರಾಧಗಳ ಸಂಖ್ಯೆ ಹೆಚ್ಚಾಗಿವೆ. ಟೆಲಿವಿಷನ್, ಮೊಬೈಲ್ ಬರುವುದಕ್ಕೂಮುಂಚೆ ಅಪರೂಪಕ್ಕೊಂದು ಅಪರಾಧಗಳು ನಡೆಯುತ್ತಿದ್ದವು’ ಎಂದು ತಿಳಿಸಿದ್ದಾರೆ.</p>.<p>‘ಅತ್ಯಾಚಾರ ಪ್ರಕರಣಗಳ ಆರೋಪಿಗಳಿಗೆ ಸಾರ್ವಜನಿಕವಾಗಿ ಶಿಕ್ಷಿಸಬೇಕು ಮತ್ತು ಕೋರ್ಟ್ ಇಂತಹ ಪ್ರಕರಣಗಳಲ್ಲಿ ತ್ವರಿತ ವಿಚಾರಣೆ ನಡೆಸಿ, ತೀರ್ಪು ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ರಾಜಸ್ಥಾನ ಸಂಪುಟ ಸಚಿವ ಬಿ.ಡಿ. ಕಲ್ಲಾ ಅವರು ‘ಅಂತರ್ಜಾಲ ಮತ್ತು ಮೊಬೈಲ್ ಬಳಕೆಯಿಂದ ಅತ್ಯಾಚಾರ, ಕೊಲೆ ಹೆಚ್ಚಾಗಿದೆ’ ಎಂದು ಹೇಳಿಕೆ ನೀಡಿದ ಮೂರು ದಿನಗಳ ನಂತರ ಬನ್ವರ್ಲಾಲ್ ಅದೇ ಮಾತುಗಳನ್ನಾಡಿದ್ದಾರೆ.</p>.<p>ರಾಜಸ್ಥಾನದಲ್ಲಿ ಇತ್ತೀಚೆಗೆ ನಡೆದ 6 ವರ್ಷದ ಬಾಲಕಿಯನ್ನು ಅತ್ಯಾಚಾರ, ಕೊಲೆ ಪ್ರಕರಣದ ಕುರಿತು ಈ ಇಬ್ಬರು ಮುಖಂಡರು ಪ್ರತಿಕ್ರಿಯೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ‘ಟೆಲಿವಿಷನ್ ಮತ್ತು ಮೊಬೈಲ್ ಬರುವುದಕ್ಕೂ ಮುಂಚೆ ಯಾವುದೇ ಅತ್ಯಾಚಾರ ನಡೆದಿಲ್ಲ’ ಎಂದು ರಾಜಸ್ಥಾನ ಕಾಂಗ್ರೆಸ್ ಸಚಿವ ಬನ್ವರ್ಲಾಲ್ ಮೇಘವಾಲ ಗುರುವಾರ ಹೇಳಿದ್ದಾರೆ.</p>.<p>ಹೆಚ್ಚುತ್ತಿರುವ ಅಪರಾಧಗಳ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಟೆಲಿವಿಷನ್ ಮತ್ತು ಅಂತರ್ಜಾಲದಲ್ಲಿ ಬರುವ ಎಲ್ಲಾ ವಿಷಯಗಳನ್ನು ಗಮನಿಸುವ ಈಗಿನ ಯುವಜನತೆ ತಪ್ಪುದಾರಿಯತ್ತಾ ಸಾಗುತ್ತಿದ್ದಾರೆ. ಅದಕ್ಕಾಗಿಯೇ ಅಪರಾಧಗಳ ಸಂಖ್ಯೆ ಹೆಚ್ಚಾಗಿವೆ. ಟೆಲಿವಿಷನ್, ಮೊಬೈಲ್ ಬರುವುದಕ್ಕೂಮುಂಚೆ ಅಪರೂಪಕ್ಕೊಂದು ಅಪರಾಧಗಳು ನಡೆಯುತ್ತಿದ್ದವು’ ಎಂದು ತಿಳಿಸಿದ್ದಾರೆ.</p>.<p>‘ಅತ್ಯಾಚಾರ ಪ್ರಕರಣಗಳ ಆರೋಪಿಗಳಿಗೆ ಸಾರ್ವಜನಿಕವಾಗಿ ಶಿಕ್ಷಿಸಬೇಕು ಮತ್ತು ಕೋರ್ಟ್ ಇಂತಹ ಪ್ರಕರಣಗಳಲ್ಲಿ ತ್ವರಿತ ವಿಚಾರಣೆ ನಡೆಸಿ, ತೀರ್ಪು ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ರಾಜಸ್ಥಾನ ಸಂಪುಟ ಸಚಿವ ಬಿ.ಡಿ. ಕಲ್ಲಾ ಅವರು ‘ಅಂತರ್ಜಾಲ ಮತ್ತು ಮೊಬೈಲ್ ಬಳಕೆಯಿಂದ ಅತ್ಯಾಚಾರ, ಕೊಲೆ ಹೆಚ್ಚಾಗಿದೆ’ ಎಂದು ಹೇಳಿಕೆ ನೀಡಿದ ಮೂರು ದಿನಗಳ ನಂತರ ಬನ್ವರ್ಲಾಲ್ ಅದೇ ಮಾತುಗಳನ್ನಾಡಿದ್ದಾರೆ.</p>.<p>ರಾಜಸ್ಥಾನದಲ್ಲಿ ಇತ್ತೀಚೆಗೆ ನಡೆದ 6 ವರ್ಷದ ಬಾಲಕಿಯನ್ನು ಅತ್ಯಾಚಾರ, ಕೊಲೆ ಪ್ರಕರಣದ ಕುರಿತು ಈ ಇಬ್ಬರು ಮುಖಂಡರು ಪ್ರತಿಕ್ರಿಯೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>