ಮೊದಲಿಗೆ ಮಧ್ಯರಾತ್ರಿ 12.30 ಗಂಟೆಗೆ ಒಂದು ಜಿಂಕೆ ಗ್ರಿಲ್ಗಳ ನಡುವೆ ಸಿಲುಕಿ ಗಾಯಗೊಂಡಿದೆ. ಈ ವಿಷಯ ಗೊತ್ತಾಗುತ್ತಿದ್ದಂತೆ ಅರಣ್ಯ ಇಲಾಖೆಯ ಪ್ರಾದೇಶಿಕ ವಿಪತ್ತು ನಿರ್ವಹಣಾ ಘಟಕದ (ಆರ್ಡಿಎಂಸಿ) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಿಂಕೆಯನ್ನು ಸುರಕ್ಷಿತವಾಗಿ ಗ್ರಿಲ್ನಿಂದ ಬಿಡಿಸಿ, ಪ್ರಥಮ ಚಿಕಿತ್ಸೆ ನೀಡಿದ್ದಾರೆ ಎಂದು ಆರ್ಡಿಎಂಸಿ ಮುಖ್ಯಸ್ಥ ಸಂತೋಷ್ ಕಡಮ್ ತಿಳಿಸಿದ್ದಾರೆ.