ಪಕ್ಷದ ಇಬ್ಬರು ಶಾಸಕರು ರಾಜೀನಾಮೆ ನೀಡುತ್ತಲೇ ಆಡಳಿತರೂಢ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿರುವ ಕಾಂಗ್ರೆಸ್, ‘ ರಾಜ್ಯಸಭಾ ಚುನಾವಣೆಯಲ್ಲಿ ವಿರೋಧಪಕ್ಷಗಳ ಗೆಲುವನ್ನು ತಡೆಯಲು ಬಿಜೆಪಿ ಪ್ರಯತ್ನಿಸುತ್ತಿದೆ,’ ಎಂದಿದೆ. ಈ ಆರೋಪ ಅಲ್ಲಗಳೆದಿರುವ ಬಿಜೆಪಿ, ‘ಶಾಸಕರು ಅಸಮಾಧಾನದಿಂದ ಕಾಂಗ್ರೆಸ್ ತೊರೆದಿದ್ದಾರೆ,’ ಎಂದು ಹೇಳಿದೆ.