ಮಲ್ಕನಗಿರಿ(ಒಡಿಶಾ): ಇಬ್ಬರು ಮಾವೋಉಗ್ರರನ್ನು ಸ್ಥಳೀಯರೆ ಕಲ್ಲು ಹೊಡೆದು ಗಾಯಗೊಳಿಸಿ ಹತ್ಯೆ ಮಾಡಿರುವ ಘಟನೆ ಒಡಿಶಾದ ಮಲ್ಕನಗಿರಿ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಜಂತುರಯ್ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಮಾವೋವಾದಿ ಉಗ್ರರು ಗ್ರಾಮಕ್ಕೆ ಬಂದು ಸ್ಥಳೀಯರನ್ನು ಗಣರಾಜ್ಯೋತ್ಸವ ಆಚರಿಸದಂತೆ ಬೆದರಿಕೆ ಹಾಕಿದ್ದರು. ಅಲ್ಲದೆ, ರಸ್ತೆ ಕಾಮಗಾರಿ ನಡೆಯುವುದನ್ನು ವಿರೋಧಿಸಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಇದಲ್ಲದೆ, ಗ್ರಾಮದ ಜನರತ್ತಬಂದೂಕಿನಿಂದ ಗುಂಡು ಹಾರಿಸಿದ್ದರು. ಇದರಿಂದ ರೊಚ್ಚಿಗೆದ್ದ ಸ್ಥಳೀಯರು ಇಬ್ಬರತ್ತ ಕಲ್ಲುತೂರಾಟ ನಡೆಸಿದರು. ಪರಿಣಾಮ ತೀವ್ರ ಗಾಯಗೊಂಡ ಉಗ್ರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.