ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಡ: ಇಬ್ಬರು ನಕ್ಸಲರ ಹತ್ಯೆಗೈದ ಭದ್ರತಾ ಪಡೆ

Last Updated 23 ಮೇ 2020, 12:07 IST
ಅಕ್ಷರ ಗಾತ್ರ

ರಾಯಪುರ: ಛತ್ತೀಸಗಡದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ನಕ್ಸಲರುಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭದ್ರತಾ ಪಡೆಗಳು ನಡೆಸಿದ ದಾಳಿಯಲ್ಲಿ ಮೃತಪಟ್ಟ ಮಾವೋವಾದಿ ನಕ್ಸಲರನ್ನುಮಲಂಗೀರ್ ಪ್ರದೇಶ ಸಮಿತಿಯ ಕಮಾಂಡರ್ ಗುಂಡಾಧುರ್ ಮತ್ತು ವಿಭಾಗೀಯ ಸಮಿತಿ ಸದಸ್ಯ ವಿನೋದ್ ಎಂದು ಗುರುತಿಸಲಾಗಿದೆ.

'ಮಂಕಪಾಲ್ ಗ್ರಾಮದ ಬಳಿ ರಾತ್ರಿ 12.45 ಕ್ಕೆ ಕಾರ್ಯಾಚರಣೆ ಪ್ರಾರಂಭವಾಯಿತು, ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ತಂಡವು ಗಸ್ತು ಕಾರ್ಯಾಚರಣೆಗೆ ತೆರಳಿದ್ದಾಗ ಮಾವೋವಾದಿಗಳ ಜೊತೆ ಗುಂಡಿನ ಕಾಳಗ ನಡೆಯಿತು. ಆ ಸಮಯದಲ್ಲಿ ಇಬ್ಬರು ಮಾವೋವಾದಿಗಳು ಭದ್ರತಾ ಪಡೆಯ ಗುಂಡಿಗೆ ಸಿಕ್ಕು ಹತ್ಯೆಯಾಗಿದ್ದಾರೆ' ಎಂದು ಪೊಲೀಸ್‌ ಮಹಾನಿರ್ದೇಶಕ ಡಿ.ಎಂ. ಅವಸ್ಥಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT