<p><strong>ನವದೆಹಲಿ: </strong>ಆಗ್ನೇಯ ಮತ್ತು ಪಶ್ಚಿಮ ದೆಹಲಿಯಲ್ಲಿ ಸುಳ್ಳು ವದಂತಿಗಳನ್ನು ಹಬ್ಬಿಸಿ ಜನರ ಆತಂಕಕ್ಕೆ ಕಾರಣವಾಗಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.</p>.<p>ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ದೆಹಲಿ ಪೊಲೀಸರು ನಗರದಲ್ಲಿ ಯಾವುದೇ ರೀತಿಯ ಅಶಾಂತಿ ಅಥವಾ ಗೊಂದಲಗಳಿಲ್ಲ ಸ್ಪಷ್ಟಪಡಿಸಿದ್ದಾರೆ.</p>.<p>ಕೆಲ ಸಮಾಜ ವಿರೋಧಿ ಶಕ್ತಿಗಳು ಸುಳ್ಳುಗಳನ್ನು ಹರಡಲು ಸಾಮಾಜಿಕ ಮಾಧ್ಯಮವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.</p>.<p>ಜನರಲ್ಲಿ ಗಾಬರಿ ಹುಟ್ಟಿಸುವುದು ಉದ್ದೇಶಪೂರ್ವಕ ತಂತ್ರದ ಭಾಗವಾಗಿದ್ದು, ಈ ತರಹದ ವದಂತಿ ಹರಡುವವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.</p>.<p>ಇಂತಹ ಕೃತ್ಯಗಳಲ್ಲಿ ಭಾಗಿಯಾಗಿರುವ ಸಾಮಾಜಿಕ ಜಾಲತಾಣ ಖಾತೆಗಳ ಮೇಲೆ ನಿಗಾ ಇಡುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ವದಂತಿಗಳಿಂದ ಭಯಭೀತರಾದ ಆಗ್ನೇಯ ಮತ್ತು ಪಶ್ಚಿಮ ಭಾಗದ ನಿವಾಸಿಗಳು ಪೊಲೀಸ್ ಸಹಾಯವಾಣಿಗೆ ಕರೆ ಮಾಡಲು ಆರಂಭಿಸಿದ ನಂತರ ಪೊಲೀಸರು ಈ ನಿಟ್ಟಿನಲ್ಲಿ ಜಾಗೃತರಾಗಿದ್ದಾರೆ.</p>.<p>ದೆಹಲಿಯ ನಂಗ್ಲೋಯಿ, ಸುರಜ್ಮಾಲ್, ಸ್ಟೇಡಿಯಂ, ಬಡಾಪುರ್, ತುಘಲಕ್ಬಾದ್. ಉತ್ತಮ್ ನಗರ (ಪಶ್ಚಿಮ), ನವಡಾ ಮತ್ತು ಪಟೇಲ್ ನಗರ ಮೆಟ್ರೊ ರೈಲು ನಿಲ್ದಾಣಗಳನ್ನು ಕೆಲ ಸಮಯ ಕಾಲ ಮುಚ್ಚಲು ಈ ವದಂತಿಗಳು ಕಾರಣವಾದವು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಆಗ್ನೇಯ ಮತ್ತು ಪಶ್ಚಿಮ ದೆಹಲಿಯಲ್ಲಿ ಸುಳ್ಳು ವದಂತಿಗಳನ್ನು ಹಬ್ಬಿಸಿ ಜನರ ಆತಂಕಕ್ಕೆ ಕಾರಣವಾಗಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.</p>.<p>ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ದೆಹಲಿ ಪೊಲೀಸರು ನಗರದಲ್ಲಿ ಯಾವುದೇ ರೀತಿಯ ಅಶಾಂತಿ ಅಥವಾ ಗೊಂದಲಗಳಿಲ್ಲ ಸ್ಪಷ್ಟಪಡಿಸಿದ್ದಾರೆ.</p>.<p>ಕೆಲ ಸಮಾಜ ವಿರೋಧಿ ಶಕ್ತಿಗಳು ಸುಳ್ಳುಗಳನ್ನು ಹರಡಲು ಸಾಮಾಜಿಕ ಮಾಧ್ಯಮವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.</p>.<p>ಜನರಲ್ಲಿ ಗಾಬರಿ ಹುಟ್ಟಿಸುವುದು ಉದ್ದೇಶಪೂರ್ವಕ ತಂತ್ರದ ಭಾಗವಾಗಿದ್ದು, ಈ ತರಹದ ವದಂತಿ ಹರಡುವವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.</p>.<p>ಇಂತಹ ಕೃತ್ಯಗಳಲ್ಲಿ ಭಾಗಿಯಾಗಿರುವ ಸಾಮಾಜಿಕ ಜಾಲತಾಣ ಖಾತೆಗಳ ಮೇಲೆ ನಿಗಾ ಇಡುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ವದಂತಿಗಳಿಂದ ಭಯಭೀತರಾದ ಆಗ್ನೇಯ ಮತ್ತು ಪಶ್ಚಿಮ ಭಾಗದ ನಿವಾಸಿಗಳು ಪೊಲೀಸ್ ಸಹಾಯವಾಣಿಗೆ ಕರೆ ಮಾಡಲು ಆರಂಭಿಸಿದ ನಂತರ ಪೊಲೀಸರು ಈ ನಿಟ್ಟಿನಲ್ಲಿ ಜಾಗೃತರಾಗಿದ್ದಾರೆ.</p>.<p>ದೆಹಲಿಯ ನಂಗ್ಲೋಯಿ, ಸುರಜ್ಮಾಲ್, ಸ್ಟೇಡಿಯಂ, ಬಡಾಪುರ್, ತುಘಲಕ್ಬಾದ್. ಉತ್ತಮ್ ನಗರ (ಪಶ್ಚಿಮ), ನವಡಾ ಮತ್ತು ಪಟೇಲ್ ನಗರ ಮೆಟ್ರೊ ರೈಲು ನಿಲ್ದಾಣಗಳನ್ನು ಕೆಲ ಸಮಯ ಕಾಲ ಮುಚ್ಚಲು ಈ ವದಂತಿಗಳು ಕಾರಣವಾದವು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>