ನವದೆಹಲಿ: ಆಗ್ನೇಯ ಮತ್ತು ಪಶ್ಚಿಮ ದೆಹಲಿಯಲ್ಲಿ ಸುಳ್ಳು ವದಂತಿಗಳನ್ನು ಹಬ್ಬಿಸಿ ಜನರ ಆತಂಕಕ್ಕೆ ಕಾರಣವಾಗಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ದೆಹಲಿ ಪೊಲೀಸರು ನಗರದಲ್ಲಿ ಯಾವುದೇ ರೀತಿಯ ಅಶಾಂತಿ ಅಥವಾ ಗೊಂದಲಗಳಿಲ್ಲ ಸ್ಪಷ್ಟಪಡಿಸಿದ್ದಾರೆ.
ಕೆಲ ಸಮಾಜ ವಿರೋಧಿ ಶಕ್ತಿಗಳು ಸುಳ್ಳುಗಳನ್ನು ಹರಡಲು ಸಾಮಾಜಿಕ ಮಾಧ್ಯಮವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಜನರಲ್ಲಿ ಗಾಬರಿ ಹುಟ್ಟಿಸುವುದು ಉದ್ದೇಶಪೂರ್ವಕ ತಂತ್ರದ ಭಾಗವಾಗಿದ್ದು, ಈ ತರಹದ ವದಂತಿ ಹರಡುವವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
The situation is peaceful. North District police is alert and present in the area. Please dnt trust and spread any unverified news/ rumours. @DelhiPolicepic.twitter.com/p8JTfFzDjs
ಇಂತಹ ಕೃತ್ಯಗಳಲ್ಲಿ ಭಾಗಿಯಾಗಿರುವ ಸಾಮಾಜಿಕ ಜಾಲತಾಣ ಖಾತೆಗಳ ಮೇಲೆ ನಿಗಾ ಇಡುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ವದಂತಿಗಳಿಂದ ಭಯಭೀತರಾದ ಆಗ್ನೇಯ ಮತ್ತು ಪಶ್ಚಿಮ ಭಾಗದ ನಿವಾಸಿಗಳು ಪೊಲೀಸ್ ಸಹಾಯವಾಣಿಗೆ ಕರೆ ಮಾಡಲು ಆರಂಭಿಸಿದ ನಂತರ ಪೊಲೀಸರು ಈ ನಿಟ್ಟಿನಲ್ಲಿ ಜಾಗೃತರಾಗಿದ್ದಾರೆ.
ದೆಹಲಿಯ ನಂಗ್ಲೋಯಿ, ಸುರಜ್ಮಾಲ್, ಸ್ಟೇಡಿಯಂ, ಬಡಾಪುರ್, ತುಘಲಕ್ಬಾದ್. ಉತ್ತಮ್ ನಗರ (ಪಶ್ಚಿಮ), ನವಡಾ ಮತ್ತು ಪಟೇಲ್ ನಗರ ಮೆಟ್ರೊ ರೈಲು ನಿಲ್ದಾಣಗಳನ್ನು ಕೆಲ ಸಮಯ ಕಾಲ ಮುಚ್ಚಲು ಈ ವದಂತಿಗಳು ಕಾರಣವಾದವು.