ನಂತರ ಅನಂತನಾಗ್ ಜಿಲ್ಲೆಯ ಅಚಬಲ್ ಪ್ರದೇಶದ ಬಿದೂರ ಗ್ರಾಮದಲ್ಲಿ ಭಯೋತ್ಪಾದಕರು ಅಡಗಿರುವ ಕುರಿತು ಖಚಿತ ಮಾಹಿತಿ ಪಡೆದ ವಿಶೇಷ ಕಾರ್ಯಪಡೆ ಮತ್ತು ರಾಷ್ಟ್ರೀಯ ರೈಫಲ್ಸ್ ಸೋಮವಾರ ಜಂಟಿ ಕಾರ್ಯಾಚರಣೆ ನಡೆಸಿದ್ದವು. ಆ ಸಂದರ್ಭ ನಡೆದ ಗುಂಡಿನ ಚಕಮಕಿಯಲ್ಲಿ ಮೇಜರ್ ಹುತಾತ್ಮರಾಗಿದ್ದು, ಇಬ್ಬರು ಉಗ್ರರು ಹತರಾಗಿದ್ದರು. ಘಟನಾ ಸ್ಥಳ ಜಿಲ್ಲಾ ಕೇಂದ್ರದಿಂದ 65 ಕಿ.ಮೀ ದೂರದಲ್ಲಿತ್ತು. ಗುಂಡಿನ ಚಕಮಕಿ ಮಂಗಳವಾರ ಬೆಳಿಗ್ಗೆಯೂ ಮುಂದುವರಿದಿದೆ.