<p><strong>ಕೋಯಿಕ್ಕೋಡ್,ಕೇರಳ:</strong>ಮಂಗಳೂರಿಗೆ ಬರುತ್ತಿದ್ದ ಎರಡು ಪ್ರತ್ಯೇಕ ರೈಲುಗಳಲ್ಲಿ ಶನಿವಾರ ಬೆಳಗ್ಗೆ ಕಳ್ಳತನ ನಡೆದಿದ್ದು ಪ್ರಯಾಣಿಕರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಲಾಗಿದೆ.</p>.<p>ಚೆನ್ನೈ–ಮಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ಮತ್ತು ತಿರುವನಂತಪುರ– ಮಂಗಳೂರು ಮಲಬಾರ್ ಎಕ್ಸ್ಪ್ರೆಸ್ ರೈಲುಗಳ ಹವಾನಿಯಂತ್ರಿತ ಬೋಗಿಗಳಲ್ಲಿ ಕಳ್ಳತನ ನಡೆದಿದೆ ಎಂದುರೈಲ್ವೆ ಪೊಲೀಸರು ತಿಳಿಸಿದ್ದಾರೆ.</p>.<p>ಚೆನ್ನೈ–ಮಂಗಳೂರು ಸೂಪರ್ ಫಾಸ್ಟ್ ರೈಲಿನಲ್ಲಿ ತಿರುಪುರ್ ಮತ್ತು ತಿರೂರ್ ಮಧ್ಯೆ ಕಳ್ಳತನ ನಡೆದಿದೆ.ಕಣ್ಣೂರಿನಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಚೆನ್ನೈ–ಮಂಗಳೂರು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪೊನ್ನಿಮಾರನ್ ಎಂಬ ಮಹಿಳೆಯ ಬ್ಯಾಗ್ನಲ್ಲಿದ್ದ ₹15 ಲಕ್ಷ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣಗಳು ಹಾಗೂ ₹22 ಸಾವಿರ ನಗದನ್ನು ಕಳ್ಳತನ ಮಾಡಲಾಗಿದೆ.</p>.<p>‘ಸಿಂಗಪುರದಿಂದ ತಿರುವನಂತಪುರದ ನೆಡುಂಬಾಶ್ಶೇರಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮೂವರು ಸದಸ್ಯರಿದ್ದ ಕುಟುಂಬವೊಂದು ಮಲಬಾರ್ ಎಕ್ಸ್ಪ್ರೆಸ್ನಲ್ಲಿ ಕಣ್ಣೂರು ಬಳಿಯ ಪಯ್ಯನ್ನೂರಿಗೆ ಪ್ರಯಾಣಿಸುತ್ತಿತ್ತು. ಇವರ ಬಳಿಯಿದ್ದ 72 ಗ್ರಾಂ ಚಿನ್ನವನ್ನು ಕಳ್ಳರು ದೋಚಿದ್ದಾರೆ’ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.</p>.<p>ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಯಿಕ್ಕೋಡ್,ಕೇರಳ:</strong>ಮಂಗಳೂರಿಗೆ ಬರುತ್ತಿದ್ದ ಎರಡು ಪ್ರತ್ಯೇಕ ರೈಲುಗಳಲ್ಲಿ ಶನಿವಾರ ಬೆಳಗ್ಗೆ ಕಳ್ಳತನ ನಡೆದಿದ್ದು ಪ್ರಯಾಣಿಕರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಲಾಗಿದೆ.</p>.<p>ಚೆನ್ನೈ–ಮಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ಮತ್ತು ತಿರುವನಂತಪುರ– ಮಂಗಳೂರು ಮಲಬಾರ್ ಎಕ್ಸ್ಪ್ರೆಸ್ ರೈಲುಗಳ ಹವಾನಿಯಂತ್ರಿತ ಬೋಗಿಗಳಲ್ಲಿ ಕಳ್ಳತನ ನಡೆದಿದೆ ಎಂದುರೈಲ್ವೆ ಪೊಲೀಸರು ತಿಳಿಸಿದ್ದಾರೆ.</p>.<p>ಚೆನ್ನೈ–ಮಂಗಳೂರು ಸೂಪರ್ ಫಾಸ್ಟ್ ರೈಲಿನಲ್ಲಿ ತಿರುಪುರ್ ಮತ್ತು ತಿರೂರ್ ಮಧ್ಯೆ ಕಳ್ಳತನ ನಡೆದಿದೆ.ಕಣ್ಣೂರಿನಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಚೆನ್ನೈ–ಮಂಗಳೂರು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪೊನ್ನಿಮಾರನ್ ಎಂಬ ಮಹಿಳೆಯ ಬ್ಯಾಗ್ನಲ್ಲಿದ್ದ ₹15 ಲಕ್ಷ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣಗಳು ಹಾಗೂ ₹22 ಸಾವಿರ ನಗದನ್ನು ಕಳ್ಳತನ ಮಾಡಲಾಗಿದೆ.</p>.<p>‘ಸಿಂಗಪುರದಿಂದ ತಿರುವನಂತಪುರದ ನೆಡುಂಬಾಶ್ಶೇರಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮೂವರು ಸದಸ್ಯರಿದ್ದ ಕುಟುಂಬವೊಂದು ಮಲಬಾರ್ ಎಕ್ಸ್ಪ್ರೆಸ್ನಲ್ಲಿ ಕಣ್ಣೂರು ಬಳಿಯ ಪಯ್ಯನ್ನೂರಿಗೆ ಪ್ರಯಾಣಿಸುತ್ತಿತ್ತು. ಇವರ ಬಳಿಯಿದ್ದ 72 ಗ್ರಾಂ ಚಿನ್ನವನ್ನು ಕಳ್ಳರು ದೋಚಿದ್ದಾರೆ’ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.</p>.<p>ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>