ನವದೆಹಲಿ:ಇಬ್ಬರು ಶಂಕಿತ ಜೈಷ್ ಎ ಮೊಹಮ್ಮದ್(ಜೆಇಎಂ) ಉಗ್ರರು ರಾಷ್ಟ್ರ ರಾಜಧಾನಿಯಲ್ಲಿರುವ ಬಗ್ಗೆ ಗುಪ್ತಚರ ಮೂಲಗಳು ದೆಹಲಿ ಪೊಲೀಸರಿಗೆ ಮಾಹಿತಿ ನೀಡಿವೆ. ಹೀಗಾಗಿ ದೆಹಲಿಯಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.
ಉಗ್ರರು ನುಸುಳಿರುವ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿರುವ ಪೊಲೀಸರು ಕುರ್ತಾ ಧರಿಸಿರುವ ಇಬ್ಬರು ಶಂಕಿತರ ಚಿತ್ರವನ್ನೂ ಬಿಡುಗಡೆ ಮಾಡಿದ್ದಾರೆ. ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣವೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
ಪಂಜಾಬ್ನಲ್ಲಿ ಕಟ್ಟೆಚ್ಚರ ಘೋಷಿಸಿದ ಕೆಲವೇ ದಿನಗಳಲ್ಲಿ ದೆಹಲಿಗೂ ಉಗ್ರರು ನುಸುಳಿರುವ ಸುಳಿವು ದೊರೆತಿದೆ. ಇದೇ 13ರಂದು ರಾತ್ರಿ ಪಂಜಾಬ್ನ ಪಠಾಣ್ಕೋಟ್ ಸಮೀಪ ನಾಲ್ವರು ಶಂಕಿತರು ಟ್ಯಾಕ್ಸಿಯೊಂದನ್ನು ಹೈಜಾಕ್ ಮಾಡಿದ್ದರು. ನಂತರ ಉಗ್ರರು ನುಸುಳಿರುವ ಶಂಕೆ ಮೇಲೆ ರಾಜ್ಯದಲ್ಲಿ ಕಟ್ಟೆಚ್ಚರ ಘೋಷಿಸಲಾಗಿತ್ತು. ಭಾನುವಾರಅಮೃತಸರದಲ್ಲಿ ನಿರಂಕಾರಿ ಪಂಥದ ಪ್ರಾರ್ಥನಾ ಮಂದಿರದ ಮೇಲೆ ಗ್ರನೇಡ್ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು 15 ಜನ ಗಾಯಗೊಂಡಿದ್ದರು.
ಇದನ್ನೂ ಓದಿ:ಪಂಜಾಬ್ನಲ್ಲಿಗ್ರನೇಡ್ ದಾಳಿಗೆ ಮೂರು ಬಲಿ
‘ಪಾಕಿಸ್ತಾನದ ಗಡಿಗೆ ಹೊಂದಿಕೊಂಡಿರುವ ಫಿರೋಜ್ಪುರದ ಮೂಲಕ ಜೈಷ್ ಎ ಮೊಹಮ್ಮದ್ ಸಂಘಟನೆಯ ಏಳು ಉಗ್ರರು ಪಂಜಾಬ್ಗೆ ನುಸುಳಿದ್ದಾರೆ. ಅಮೃತಸರದ ಮೂಲಕ ಅವರು ದೆಹಲಿಗೆ ತೆರಳಲು ಯೋಜನೆ ರೂಪಿಸಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.