<p><strong>ಕೂಡಲಸಂಗಮ</strong>: ಗ್ರಾಮೀಣ ಪ್ರದೇಶದ ಮಕ್ಕಳಿಗೂ ಆಧುನಿಕ ತಂತ್ರಜ್ಞಾನದ ಶಿಕ್ಷಣ ದೊರೆಯಬೇಕು ಎಂದು ಸಿದ್ದಗಂಗಾ ವಸತಿ ಶಾಲೆಯ ಅಧ್ಯಕ್ಷ ಎಸ್.ಆರ್.ನವಲಿ ಹಿರೇಮಠ ಹೇಳಿದರು. ಇಲ್ಲಿನ ಪುನರ್ ವಸತಿ ಕೇಂದ್ರದ ಸಿದ್ಧಗಂಗಾ ವಸತಿ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ನಮ್ಮ ಶಾಲೆ ಸಿ.ಬಿ.ಎಸ್.ಸಿ ಯಿಂದ ಮಾನ್ಯತೆ ಪಡೆದಿದ್ದು, ಗ್ರಾಮೀಣ ಭಾಗದ ಮಕ್ಕಳು ಇದರ ಸದುಪಯೋಗ ಪಡೆಯಬೇಕು. ಬಹುತೇಕ ಸಿ.ಬಿ.ಎಸ್.ಸಿ ಶಾಲೆಗಳು ನಗರ ಪ್ರದೇಶದಲ್ಲಿ ಇವೆ. ಸಿ.ಬಿ.ಎಸ್.ಸಿ ಗೆ ನುರಿತ ಬೋಧನೆ ಮಾಡುವ ಸಿಬ್ಬಂದಿ ಗ್ರಾಮೀಣ ಪ್ರದೇಶಕ್ಕೆ ಬರಲು ಹಿಂದೇಟು ಹಾಕುವ ಈ ದಿನಗಳಲ್ಲಿ ನಾವು ಉತ್ತಮ ಶಿಕ್ಷಕರನ್ನು ನಗರ ಪ್ರದೇಶದಿಂದ ಗ್ರಾಮೀಣ ಪ್ರದೇಶಕ್ಕೆ ಕರೆತಂದು ಈ ಭಾಗದ ಮಕ್ಕಳಿಗೆ ಗುಣ್ಣಮಟ್ಟದ ಶಿಕ್ಷಣವನ್ನು ಕೊಡುತ್ತಿದ್ದೇವೆ’ ಎಂದರು.</p>.<p>ಶಿಕ್ಷಣ ತಜ್ಞ ನಿಖಿತ್ರಾಜ್ ಮಾತನಾಡಿ, ‘ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಸಾಮಾನ್ಯ ಜನರಿಗೆ ಬದುಕುವ ಸ್ವಾತಂತ್ರ್ಯ ದೊರಕಿಲ್ಲ. ಈ ಸ್ವಾತಂತ್ರ್ಯವನ್ನು ಶಿಕ್ಷಣದ ಮೂಲಕ ಪಡೆಯುವ ಕಾರ್ಯವನ್ನು ಇಂದಿನ ಯುವ ಜನಾಂಗ ಮಾಡಬೇಕು. ಪಾಲಕರು, ಶಿಕ್ಷಕರು ಮಕ್ಕಳಿಗೆ ಶಿಕ್ಷಣ ಕೊಟ್ಟು ಸಂಸ್ಕಾರ ಕೊಡದಿದ್ದರೆ ಉತ್ತಮ ಪ್ರಜೆಗಳು ನಿರ್ಮಾಣವಾಗಲು ಸಾಧ್ಯವಿಲ್ಲ. ಆದ್ದರಿಂದ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವು ಅಷ್ಟೇ ಅವಶ್ಯ’ ಎಂದರು.</p>.<p>ಸಮಾರಂಭದಲ್ಲಿ ಡಾ.ನಾರಾಯಣ ವನಕಿ, ಪ್ರಗತಿಪರ ರೈತ ದೇವೇಂದ್ರಪ್ಪ ಬಳೂಟಗಿ, ರೇಖಾ ನವಲಿಹಿರೇಮಠ,ಸಿದ್ದು ನವಲಿಹಿರೇಮಠ, ಆಡಳಿತಾಧಿಕಾರಿ ಎಸ್.ಬಿ.ಕೋಟಿ, ಪ್ರಾಂಶುಪಾಲ ಶಿವಕುಮಾರ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡಲಸಂಗಮ</strong>: ಗ್ರಾಮೀಣ ಪ್ರದೇಶದ ಮಕ್ಕಳಿಗೂ ಆಧುನಿಕ ತಂತ್ರಜ್ಞಾನದ ಶಿಕ್ಷಣ ದೊರೆಯಬೇಕು ಎಂದು ಸಿದ್ದಗಂಗಾ ವಸತಿ ಶಾಲೆಯ ಅಧ್ಯಕ್ಷ ಎಸ್.ಆರ್.ನವಲಿ ಹಿರೇಮಠ ಹೇಳಿದರು. ಇಲ್ಲಿನ ಪುನರ್ ವಸತಿ ಕೇಂದ್ರದ ಸಿದ್ಧಗಂಗಾ ವಸತಿ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ನಮ್ಮ ಶಾಲೆ ಸಿ.ಬಿ.ಎಸ್.ಸಿ ಯಿಂದ ಮಾನ್ಯತೆ ಪಡೆದಿದ್ದು, ಗ್ರಾಮೀಣ ಭಾಗದ ಮಕ್ಕಳು ಇದರ ಸದುಪಯೋಗ ಪಡೆಯಬೇಕು. ಬಹುತೇಕ ಸಿ.ಬಿ.ಎಸ್.ಸಿ ಶಾಲೆಗಳು ನಗರ ಪ್ರದೇಶದಲ್ಲಿ ಇವೆ. ಸಿ.ಬಿ.ಎಸ್.ಸಿ ಗೆ ನುರಿತ ಬೋಧನೆ ಮಾಡುವ ಸಿಬ್ಬಂದಿ ಗ್ರಾಮೀಣ ಪ್ರದೇಶಕ್ಕೆ ಬರಲು ಹಿಂದೇಟು ಹಾಕುವ ಈ ದಿನಗಳಲ್ಲಿ ನಾವು ಉತ್ತಮ ಶಿಕ್ಷಕರನ್ನು ನಗರ ಪ್ರದೇಶದಿಂದ ಗ್ರಾಮೀಣ ಪ್ರದೇಶಕ್ಕೆ ಕರೆತಂದು ಈ ಭಾಗದ ಮಕ್ಕಳಿಗೆ ಗುಣ್ಣಮಟ್ಟದ ಶಿಕ್ಷಣವನ್ನು ಕೊಡುತ್ತಿದ್ದೇವೆ’ ಎಂದರು.</p>.<p>ಶಿಕ್ಷಣ ತಜ್ಞ ನಿಖಿತ್ರಾಜ್ ಮಾತನಾಡಿ, ‘ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಸಾಮಾನ್ಯ ಜನರಿಗೆ ಬದುಕುವ ಸ್ವಾತಂತ್ರ್ಯ ದೊರಕಿಲ್ಲ. ಈ ಸ್ವಾತಂತ್ರ್ಯವನ್ನು ಶಿಕ್ಷಣದ ಮೂಲಕ ಪಡೆಯುವ ಕಾರ್ಯವನ್ನು ಇಂದಿನ ಯುವ ಜನಾಂಗ ಮಾಡಬೇಕು. ಪಾಲಕರು, ಶಿಕ್ಷಕರು ಮಕ್ಕಳಿಗೆ ಶಿಕ್ಷಣ ಕೊಟ್ಟು ಸಂಸ್ಕಾರ ಕೊಡದಿದ್ದರೆ ಉತ್ತಮ ಪ್ರಜೆಗಳು ನಿರ್ಮಾಣವಾಗಲು ಸಾಧ್ಯವಿಲ್ಲ. ಆದ್ದರಿಂದ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವು ಅಷ್ಟೇ ಅವಶ್ಯ’ ಎಂದರು.</p>.<p>ಸಮಾರಂಭದಲ್ಲಿ ಡಾ.ನಾರಾಯಣ ವನಕಿ, ಪ್ರಗತಿಪರ ರೈತ ದೇವೇಂದ್ರಪ್ಪ ಬಳೂಟಗಿ, ರೇಖಾ ನವಲಿಹಿರೇಮಠ,ಸಿದ್ದು ನವಲಿಹಿರೇಮಠ, ಆಡಳಿತಾಧಿಕಾರಿ ಎಸ್.ಬಿ.ಕೋಟಿ, ಪ್ರಾಂಶುಪಾಲ ಶಿವಕುಮಾರ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>