ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಈ ಬಾರಿ ನಾಡೋಜ ಗೌರವ ಸರೋದ್ ವಾದಕ ರಾಜೀವ್ ತಾರಾನಾಥ್ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಮಲ್ಲಿಕಾ ಎಸ್.ಘಂಟಿ ತಿಳಿಸಿದ್ದಾರೆ.
ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಿಯಮದ ಪ್ರಕಾರ ಮೂವರ ಹೆಸರು ಶಿಫಾರಸು ಮಾಡಲಾಗಿತ್ತು. ಈ ಪೈಕಿ ರಾಜ್ಯಪಾಲರು ತಾರಾನಾಥ್ ಅವರ ಹೆಸರಿಗೆ ಅಂಕಿತ ಹಾಕಿದ್ದಾರೆ ಎಂದು ಮಾಹಿತಿ ನೀಡಿದರು.