ಮಂಜುನಾಥ್ ಅವರು ನಕಲಿ ಜಾತಿ ಪ್ರಮಾಣಪತ್ರದ ನೆರವಿನಿಂದ ಮುಳಬಾಗಿಲು ಮೀಸಲು ಕ್ಷೇತ್ರದಿಂದ 2013ರಲ್ಲಿ ವಿಧಾನಸಭಾ ಸದಸ್ಯರಾಗಿ ಚುನಾಯಿತರಾಗಿದ್ದು, ಸರ್ಕಾರದಿಂದ ಜನಪ್ರತಿನಿಧಿಯ ಸವಲತ್ತುಗಳನ್ನು ಪಡೆದಿದ್ದಾರೆ. ಆದರೆ, ಅವರ ಜಾತಿ ಪ್ರಮಾಣಪತ್ರವನ್ನು ಅಸಿಂಧುಗೊಳಿಸಿರುವ ಹೈಕೋರ್ಟ್ ಆ ಪ್ರಮಾಣಪತ್ರಕ್ಕೆ ಕಾನೂನಿನ ಮಾನ್ಯತೆ ಇಲ್ಲವೆಂದು ಹೇಳಿದೆ. ಹೀಗಾಗಿ ಅವರ ವಿಧಾನಸಭಾ ಸದಸ್ಯತ್ವವು ಕಾನೂನುಬಾಹಿರವೆಂದು ಆದೇಶಿಸಿದೆ ಎಂದು ಹೇಳಿದ್ದಾರೆ.