ನವದೆಹಲಿ: ಯಮುನಾ ನದಿ ಸ್ವಚ್ಛತೆ ಕುರಿತಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ), ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶ ಸರ್ಕಾರಗಳಿಗೆ ತಲಾ ₹10 ಕೋಟಿ ಮೊತ್ತದ ಕಾರ್ಯಸಾಧನಾ ಖಾತರಿ ಪ್ರಮಾಣ ಪತ್ರವನ್ನು ಒಂದುವಾರದ ಒಳಗೆ ಸಲ್ಲಿಸುವಂತೆ ಮಂಗಳವಾರ ನಿರ್ದೇಶನ ನೀಡಿದೆ.