‘ಮೆಟ್ರೊ’ ಎರಡನೇ ಹಂತಕ್ಕೆ ₹1,012 ಕೋಟಿ ಅನುದಾನ

ನವದೆಹಲಿ: ಬೆಂಗಳೂರಿನ ನಮ್ಮ ಮೆಟ್ರೊ ಯೋಜನೆಯ 2ನೇ ಹಂತಕ್ಕೆ ಕೇಂದ್ರದ ನಗರಾಭಿವೃದ್ಧಿ ಸಚಿವಾಲಯವು 2019–20ನೇ ಸಾಲಿನ ಬಜೆಟ್ನಲ್ಲಿ ₹ 1,012 ಕೋಟಿ ಒದಗಿಸಲು ನಿರ್ಧರಿಸಿದೆ.
2017–18ರಲ್ಲಿ ಮೆಟ್ರೊ ಯೋಜನೆಗಾಗಿ ₹ 150. 94 ಕೋಟಿ ಮೀಸಲಿರಿಸಿದ್ದ ಸರ್ಕಾರ, ಕಳೆದ ವರ್ಷ ಅಂದಾಜಿಸಲಾಗಿದ್ದ ₹ 300 ಕೋಟಿ ಪೈಕಿ ₹ 168 ಕೋಟಿ ವ್ಯಯಿಸಿದೆ.
ಮುಂದಿನ ಹಣಕಾಸು ವರ್ಷಕ್ಕೆ ₹1,012 ಕೋಟಿ ಅಂದಾಜು ಅನುದಾನವನ್ನು ಬಜೆಟ್ನಲ್ಲಿ ಕಾದಿರಿಸುವ ಮೂಲಕ ಉದ್ಯಾನ ನಗರಿಯ ಸಂಚಾರ ದಟ್ಟಣೆ ಕಡಿತಗೊಳಿಸಲು ಮತ್ತಷ್ಟು ಹೊಸ ಮಾರ್ಗಗಳ ನಿರ್ಮಾಣದ ರೂಪುರೇಷೆ ಸಿದ್ಧಪಡಿಸಲು ನಿರ್ಧರಿಸಲಾಗಿದೆ.
ಕರ್ನಾಟಕ ಸಂಯೋಜಿತ ನಗರ ನೀರು ನಿರ್ವಹಣೆ ಹೂಡಿಕೆ ಯೋಜನೆ–1ಕ್ಕೆ ₹217 ಕೋಟಿ, ರಾಜ್ಯ ಹೆದ್ದಾರಿ ಸುಧಾರಣೆಯ ಯೋಜನೆ–2ಕ್ಕೆ ₹ 300 ಕೋಟಿ, ಕರ್ನಾಟಕ ಜಲಾನಯನ ಅಭಿವೃದ್ಧಿ ಯೋಜನೆ–2ಕ್ಕೆ ₹131 ಕೋಟಿ ಅಂದಾಜು ಅನುದಾನ ಒದಗಿಸಲು ಶುಕ್ರವಾರ ಸಚಿವ ಪೀಯೂಷ್ ಗೋಯಲ್ ಮಂಡಿಸಿರುವ ಕೇಂದ್ರದ ಮಧ್ಯಂತರ ಬಜೆಟ್ನಲ್ಲಿ ಘೋಷಿಸಲಾಗಿದೆ. ರಾಜ್ಯದ ವಿವಿಧ ಸಂಸ್ಥೆಗಳಿಗೆ ವಾರ್ಷಿಕ ಅನುದಾನ ಹಂಚಿಕೆಯಲ್ಲಿ ಹೆಚ್ಚಳ ಮಾಡಲಾಗಿದೆ. ಕೆಳಕಂಡ ಸಂಸ್ಥೆಗಳಿಗೆ 2019–20ನೇ ಸಾಲಿಗೆ ಹೆಚ್ಚುವರಿ ಅನುದಾನ ಮೀಸಲಿರಿಸಲು ನಿರ್ಧರಿಸಲಾಗಿದೆ.
ಯಾವುದಕ್ಕೆ ಎಷ್ಟು ಅನುದಾನ?
* ಬೆಂಗಳೂರಿನ ರಾಷ್ಟ್ರೀಯ ಯೂನಾನಿ ಔಷಧಿ ಸಂಸ್ಥೆಗೆ ₹ 40 ಕೋಟಿ
* ಸೆಂಟರ್ ಫಾರ್ ನ್ಯಾನೋ ಅಂಡ್ ಸಾಫ್ಟ್ ಮ್ಯಾಟರ್ ಸೈನ್ಸ್ಗೆ ₹ 10.40 ಕೋಟಿ
* ಭಾರತೀಯ ವಿಜ್ಞಾನ ಅಕಾಡೆಮಿಗೆ ₹ 13.01 ಕೋಟಿ
* ಭಾರತೀಯ ಆ್ಯಸ್ಟ್ರೋ ಫಿಸಿಕ್ಸ್ ಸಂಸ್ಥೆಗೆ ₹ 61.11 ಕೋಟಿ
* ಜವಾಹರಲಾಲ್ ನೆಹರೂ ಅಡ್ವಾನ್ಸ್ಡ್ ಸೈಂಟಿಫಿಕ್ ಸಂಶೋಧನಾ ಕೇಂದ್ರಕ್ಕೆ 89.89 ಕೋಟಿ
* ರಾಮನ್ ಸಂಶೋಧನಾ ಸಂಸ್ಥೆಗೆ ₹54.09 ಕೋಟಿ
* ನಿಮ್ಹಾನ್ಸ್ ಸಂಸ್ಥೆಗೆ ₹ 450 ಕೋಟಿ
* ಭಾರತೀಯ ವಿಜ್ಞಾನ ಸಂಸ್ಥೆಗೆ ₹ 179 ಕೋಟಿ
* ಮೈಸೂರಿನ ಸ್ಪೀಚ್ ಅಂಡ್ ಹಿಯರಿಂಗ್ ಸಂಸ್ಥೆಗೆ ₹ 55 ಕೋಟಿ
ಇವನ್ನೂ ಓದಿ...
* ನಿಮ್ಮ ಆದಾಯಕ್ಕೂ ಇದೆಯೇ ತೆರಿಗೆ ವಿನಾಯಿತಿ? ಬಜೆಟ್ ಬಳಿಕ ಆಗಿದ್ದೇನು?
* ರಾಷ್ಟ್ರೀಯ ಕಾಮಧೇನು ಆಯೋಗ ರಚನೆ, ಗೋಕುಲ ಮಿಷನ್ಗೆ ₹750 ಕೋಟಿ
* ಮಧ್ಯಮ ವರ್ಗ, ರೈತ, ಕಾರ್ಮಿಕರಿಗೆ ಬಜೆಟ್ನಲ್ಲಿ ಏನೇನಿದೆ? ಇಲ್ಲಿದೆ ಮಾಹಿತಿ
* ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಸ್ಥಾಪನೆ, ರೈತರ ಖಾತೆಗೆ ₹6 ಸಾವಿರ
* ಎಸ್ಸಿ, ಎಸ್ಟಿ ಅನುದಾನ ಗಣನೀಯ ಪ್ರಮಾಣದಲ್ಲಿ ಹೆಚ್ಚಳ
* ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲ್ ಕ್ರಾಂತಿ: ₹93 ಸಾವಿರ ಕೋಟಿ ಅನುದಾನ
* ವೇತನದಾರರಿಗೆ ಬಜೆಟ್ ಬೋನಸ್: ₹ 5 ಲಕ್ಷ ವರೆಗೆ ತೆರಿಗೆ ವಿನಾಯ್ತಿ
* ಕೇಂದ್ರ ಬಜೆಟ್ 2019: ರಕ್ಷಣಾ ವೆಚ್ಚ ₹3 ಲಕ್ಷ ಕೋಟಿಗೆ ಏರಿಕೆ
* ರೈಲ್ವೆಗೆ ₹1.6 ಲಕ್ಷ ಕೋಟಿ: ಕಾವಲುರಹಿತ ಕ್ರಾಸಿಂಗ್ಗಳು ಬಂದ್
* ಹೆಚ್ಚಿದೆ ಆದಾಯ, ಪ್ರಕಾಶಿಸುತ್ತಿದೆ ಭಾರತ: ಪೀಯೂಷ್ ಗೋಯಲ್
* ಅಸಂಘಟಿತ ವಲಯದ ಕಾರ್ಮಿಕರಿಗಾಗಿ ‘ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ಧನ್’
* ಆಯುಷ್ಮಾನ್ ಭಾರತ್ ಯೋಜನೆಯಡಿ 10 ಲಕ್ಷ ಜನರಿಗೆ ಚಿಕಿತ್ಸೆ
* ನಾನು ರೂಪಿಸಿದ್ದ ಯೋಜನೆಯ ಅರ್ಧ ಕಾಪಿ ಹೊಡೆದಿದ್ದಾರೆ: ಸಿದ್ದರಾಮಯ್ಯ ಆರೋಪ
* ಕೃತಕ ಬುದ್ಧಿಮತ್ತೆ ಕೇಂದ್ರ ಸ್ಥಾಪನೆ, ಲಕ್ಷ ಡಿಜಿಟಲ್ ಗ್ರಾಮ ನಿರ್ಮಾಣಕ್ಕೆ ಒತ್ತು
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.