<p><strong>ನವದೆಹಲಿ</strong>: ದೇಶದಲ್ಲಿ <a href="https://www.prajavani.net/tags/covid-19" target="_blank">ಕೋವಿಡ್ 19</a> ವೈರಸ್ಸೋಂಕು ಹರಡುತ್ತಿದ್ದಂತೆ ವಿದೇಶದಿಂದ ಬರುವ ಎಲ್ಲ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಬುಧವಾರ ಸೂಚನೆ ನೀಡಿದ್ದಾರೆ. ಇಲ್ಲಿಯವರಿಗೆ 28 ಮಂದಿಗೆ <a href="https://www.prajavani.net/tags/coronavirus" target="_blank">ಸೋಂಕು</a> ತಗಲಿರುವ ಪ್ರಕರಣ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಈ ಹಿಂದೆ 12 ದೇಶಗಳಿಂದ ಬಂದ ಪ್ರಯಾಣಿಕರನ್ನು ಮಾತ್ರ ವೈದ್ಯಕೀಯ ತಪಾಸಣೆಗೊಳಪಡಿಸಲಾಗುತ್ತಿತ್ತು. ಆದರೆ ಇನ್ನು ಮುಂದೆ ಯಾವುದೇ ದೇಶದಿಂದ ಬರುವ ಎಲ್ಲಪ್ರಯಾಣಿಕರನ್ನು ತಪಾಸಣೆಗೊಳಪಡಿಸಲಾಗುವುದುಎಂದು ಸಚಿವರು ಹೇಳಿದ್ದಾರೆ.</p>.<p>ಕೋವಿಡ್ 19 ವೈರಸ್ ಸೋಂಕು ಬಗ್ಗೆ ಬುಧವಾರ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಸಚಿವರು ಆಗ್ರಾದಲ್ಲಿನ ಕುಟುಂಬವೊಂದರ 6 ಸದಸ್ಯರಿಗೆ ಸೋಂಕು ತಗಲಿದೆ ಎಂದು ಹೇಳಿದ್ದಾರೆ.</p>.<p>ಆದಾಗ್ಯೂ, ಇಟಲಿಯ 21 ಪ್ರಜೆಗಳ ಪೈಕಿ 14 ಮಂದಿಗೆ ವೈರಸ್ ಸೋಂಕು ತಗಲಿದೆ. ಅದೇಜೈಪುರದಲ್ಲಿರುವಇಟಲಿಯ ಪ್ರವಾಸಿಗರಿಬ್ಬರಿಗೆಸೋಂಕು ತಗಲಿರುವುದು ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ.</p>.<p><strong>ಇದನ್ನೂ ಓದಿ</strong>:<a href="https://www.prajavani.net/stories/national/coronavirus-outbreak-fifteen-italian-nationals-test-positive-for-coronavirus-in-india-709894.html" target="_blank">ಭಾರತಕ್ಕೆ ಬಂದಿರುವ 15 ಇಟಲಿ ಪ್ರವಾಸಿಗರಲ್ಲಿ ಕೊರೊನಾ ಸೋಂಕು ಪತ್ತೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಲ್ಲಿ <a href="https://www.prajavani.net/tags/covid-19" target="_blank">ಕೋವಿಡ್ 19</a> ವೈರಸ್ಸೋಂಕು ಹರಡುತ್ತಿದ್ದಂತೆ ವಿದೇಶದಿಂದ ಬರುವ ಎಲ್ಲ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಬುಧವಾರ ಸೂಚನೆ ನೀಡಿದ್ದಾರೆ. ಇಲ್ಲಿಯವರಿಗೆ 28 ಮಂದಿಗೆ <a href="https://www.prajavani.net/tags/coronavirus" target="_blank">ಸೋಂಕು</a> ತಗಲಿರುವ ಪ್ರಕರಣ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಈ ಹಿಂದೆ 12 ದೇಶಗಳಿಂದ ಬಂದ ಪ್ರಯಾಣಿಕರನ್ನು ಮಾತ್ರ ವೈದ್ಯಕೀಯ ತಪಾಸಣೆಗೊಳಪಡಿಸಲಾಗುತ್ತಿತ್ತು. ಆದರೆ ಇನ್ನು ಮುಂದೆ ಯಾವುದೇ ದೇಶದಿಂದ ಬರುವ ಎಲ್ಲಪ್ರಯಾಣಿಕರನ್ನು ತಪಾಸಣೆಗೊಳಪಡಿಸಲಾಗುವುದುಎಂದು ಸಚಿವರು ಹೇಳಿದ್ದಾರೆ.</p>.<p>ಕೋವಿಡ್ 19 ವೈರಸ್ ಸೋಂಕು ಬಗ್ಗೆ ಬುಧವಾರ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಸಚಿವರು ಆಗ್ರಾದಲ್ಲಿನ ಕುಟುಂಬವೊಂದರ 6 ಸದಸ್ಯರಿಗೆ ಸೋಂಕು ತಗಲಿದೆ ಎಂದು ಹೇಳಿದ್ದಾರೆ.</p>.<p>ಆದಾಗ್ಯೂ, ಇಟಲಿಯ 21 ಪ್ರಜೆಗಳ ಪೈಕಿ 14 ಮಂದಿಗೆ ವೈರಸ್ ಸೋಂಕು ತಗಲಿದೆ. ಅದೇಜೈಪುರದಲ್ಲಿರುವಇಟಲಿಯ ಪ್ರವಾಸಿಗರಿಬ್ಬರಿಗೆಸೋಂಕು ತಗಲಿರುವುದು ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ.</p>.<p><strong>ಇದನ್ನೂ ಓದಿ</strong>:<a href="https://www.prajavani.net/stories/national/coronavirus-outbreak-fifteen-italian-nationals-test-positive-for-coronavirus-in-india-709894.html" target="_blank">ಭಾರತಕ್ಕೆ ಬಂದಿರುವ 15 ಇಟಲಿ ಪ್ರವಾಸಿಗರಲ್ಲಿ ಕೊರೊನಾ ಸೋಂಕು ಪತ್ತೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>