<p><strong>ನವದೆಹಲಿ: </strong>ದೇಶದಲ್ಲಿ ಕೊರೊನಾ ಪರೀಕ್ಷಾ ಸಾಮರ್ಥ್ಯವನ್ನು ದಿನಕ್ಕೆ 95 ಸಾವಿರದ ವರೆಗೆ ಹೆಚ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ಹರ್ಷವರ್ಧನ್ ಶನಿವಾರ ತಿಳಿಸಿದ್ದಾರೆ.</p>.<p>ಈವರೆಗೆ 332 ಸರ್ಕಾರಿ ಮತ್ತು 121 ಖಾಸಗಿ ಪ್ರಯೋಗಾಲಯಗಳಲ್ಲಿ 15,25,631 ಕೊರೊನಾ ಪರೀಕ್ಷೆ ನಡೆಸಲಾಗಿದೆ ಎಂದು ಅವರು ಹೇಳಿರುವುದಾಗಿ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.</p>.<p>ಈಶಾನ್ಯ ರಾಜ್ಯಗಳಲ್ಲಿ ಕೊರೊನಾ ಪರಿಸ್ಥಿತಿ ಮತ್ತು ಸೋಂಕು ನಿಯಂತ್ರಣಕ್ಕೆ ಸರ್ಕಾರಗಳು ಕೈಗೊಂಡ ಕ್ರಮಗಳ ಬಗ್ಗೆ ಅವರು ಪರಾಮರ್ಶೆ ನಡೆಸಿದರು. ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ತಂಬಾಕು ಸೇವನೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ಕಡ್ಡಾಯವಾಗಿ ನಿಷೇಧಿಸಬೇಕು ಎಂದು ಸಚಿವರು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/muslim-central-committee-president-five-lakhs-donated-for-prime-ministers-care-fund-726346.html" itemprop="url">ಕೋವಿಡ್-19| ಪಿಎಂ ಕೇರ್ಸ್ಗೆ ₹5 ಲಕ್ಷ ದೇಣಿಗೆ ನೀಡಿದ ಮುಸ್ಲಿಂ ಸೆಂಟ್ರಲ್ ಕಮಿಟಿ</a></p>.<p>ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ತ್ರಿಪುರಾ ಮತ್ತು ಸಿಕ್ಕಿಂ ರಾಜ್ಯಗಳ ಪ್ರತಿನಿಧಿಗಳ ಜತೆ ಉನ್ನತ ಮಟ್ಟದ ಸಭೆ ನಡೆಸಿದ ಅವರು, ಕೋವಿಡ್–19 ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರಗಳ ಬದ್ಧತೆಯನ್ನು ಹರ್ಷವರ್ಧನ್ ಶ್ಲಾಘಿಸಿದ್ದಾರೆ.</p>.<p>‘ಈಶಾನ್ಯ ರಾಜ್ಯಗಳ ಹಸಿರು ವಲಯಗಳನ್ನು ನೋಡಿದಾಗ ದೊಡ್ಡ ಸಮಾಧಾನವಾಗುತ್ತಿದೆ. ಆ ಪ್ರದೇಶಗಳು ಸ್ಫೂರ್ತಿದಾಯಕವಾಗಿವೆ. ಸದ್ಯದ ಮಾಹಿತಿ ಪ್ರಕಾರ, ಅಸ್ಸಾಂ ಮತ್ತು ತ್ರಿಪುರಾದಲ್ಲಿ ಮಾತ್ರ ಕೊರೊನಾ ಪ್ರಕರಣಗಳು ಅಸ್ತಿತ್ವದಲ್ಲಿವೆ. ಉಳಿದೆಲ್ಲ ರಾಜ್ಯಗಳು ಹಸಿರುವಲಯ ಆಗಿವೆ’ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/only-20-people-can-attend-funeral-but-1000-can-gather-near-alcohol-shops-sanjay-raut-726311.html" itemprop="url">ಮಸಣಕ್ಕೆ 20 ಜನ, ಆದ್ರೆ ಹೆಂಡದಂಗಡಿ ಮುಂದೆ ಸಾವಿರ ಮಂದಿ: ಸಂಜಯ್ ರಾವುತ್ ವ್ಯಂಗ್ಯ</a></p>.<p>ಶನಿವಾರ ಬೆಳಿಗ್ಗಿನ ಮಾಹಿತಿ ಪ್ರಕಾರ ತ್ರಿಪುರಾದಲ್ಲಿ ಈವರೆಗೆ ಒಟ್ಟು 118, ಅಸ್ಸಾಂನಲ್ಲಿ 59, ಮೇಘಾಲಯದಲ್ಲಿ 12, ಮಣಿಪುರದಲ್ಲಿ 2, ಮಿಜೋರಾಂ ಮತ್ತು ಅರುಣಾಚಲ ಪ್ರದೇಶದಲ್ಲಿ ತಲಾ ಒಂದು ಕೊರೊನಾ ಪ್ರಕರಣ ದೃಢಪಟ್ಟಿದೆ ಎಂದು ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೇಶದಲ್ಲಿ ಕೊರೊನಾ ಪರೀಕ್ಷಾ ಸಾಮರ್ಥ್ಯವನ್ನು ದಿನಕ್ಕೆ 95 ಸಾವಿರದ ವರೆಗೆ ಹೆಚ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ಹರ್ಷವರ್ಧನ್ ಶನಿವಾರ ತಿಳಿಸಿದ್ದಾರೆ.</p>.<p>ಈವರೆಗೆ 332 ಸರ್ಕಾರಿ ಮತ್ತು 121 ಖಾಸಗಿ ಪ್ರಯೋಗಾಲಯಗಳಲ್ಲಿ 15,25,631 ಕೊರೊನಾ ಪರೀಕ್ಷೆ ನಡೆಸಲಾಗಿದೆ ಎಂದು ಅವರು ಹೇಳಿರುವುದಾಗಿ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.</p>.<p>ಈಶಾನ್ಯ ರಾಜ್ಯಗಳಲ್ಲಿ ಕೊರೊನಾ ಪರಿಸ್ಥಿತಿ ಮತ್ತು ಸೋಂಕು ನಿಯಂತ್ರಣಕ್ಕೆ ಸರ್ಕಾರಗಳು ಕೈಗೊಂಡ ಕ್ರಮಗಳ ಬಗ್ಗೆ ಅವರು ಪರಾಮರ್ಶೆ ನಡೆಸಿದರು. ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ತಂಬಾಕು ಸೇವನೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ಕಡ್ಡಾಯವಾಗಿ ನಿಷೇಧಿಸಬೇಕು ಎಂದು ಸಚಿವರು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/muslim-central-committee-president-five-lakhs-donated-for-prime-ministers-care-fund-726346.html" itemprop="url">ಕೋವಿಡ್-19| ಪಿಎಂ ಕೇರ್ಸ್ಗೆ ₹5 ಲಕ್ಷ ದೇಣಿಗೆ ನೀಡಿದ ಮುಸ್ಲಿಂ ಸೆಂಟ್ರಲ್ ಕಮಿಟಿ</a></p>.<p>ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ತ್ರಿಪುರಾ ಮತ್ತು ಸಿಕ್ಕಿಂ ರಾಜ್ಯಗಳ ಪ್ರತಿನಿಧಿಗಳ ಜತೆ ಉನ್ನತ ಮಟ್ಟದ ಸಭೆ ನಡೆಸಿದ ಅವರು, ಕೋವಿಡ್–19 ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರಗಳ ಬದ್ಧತೆಯನ್ನು ಹರ್ಷವರ್ಧನ್ ಶ್ಲಾಘಿಸಿದ್ದಾರೆ.</p>.<p>‘ಈಶಾನ್ಯ ರಾಜ್ಯಗಳ ಹಸಿರು ವಲಯಗಳನ್ನು ನೋಡಿದಾಗ ದೊಡ್ಡ ಸಮಾಧಾನವಾಗುತ್ತಿದೆ. ಆ ಪ್ರದೇಶಗಳು ಸ್ಫೂರ್ತಿದಾಯಕವಾಗಿವೆ. ಸದ್ಯದ ಮಾಹಿತಿ ಪ್ರಕಾರ, ಅಸ್ಸಾಂ ಮತ್ತು ತ್ರಿಪುರಾದಲ್ಲಿ ಮಾತ್ರ ಕೊರೊನಾ ಪ್ರಕರಣಗಳು ಅಸ್ತಿತ್ವದಲ್ಲಿವೆ. ಉಳಿದೆಲ್ಲ ರಾಜ್ಯಗಳು ಹಸಿರುವಲಯ ಆಗಿವೆ’ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/only-20-people-can-attend-funeral-but-1000-can-gather-near-alcohol-shops-sanjay-raut-726311.html" itemprop="url">ಮಸಣಕ್ಕೆ 20 ಜನ, ಆದ್ರೆ ಹೆಂಡದಂಗಡಿ ಮುಂದೆ ಸಾವಿರ ಮಂದಿ: ಸಂಜಯ್ ರಾವುತ್ ವ್ಯಂಗ್ಯ</a></p>.<p>ಶನಿವಾರ ಬೆಳಿಗ್ಗಿನ ಮಾಹಿತಿ ಪ್ರಕಾರ ತ್ರಿಪುರಾದಲ್ಲಿ ಈವರೆಗೆ ಒಟ್ಟು 118, ಅಸ್ಸಾಂನಲ್ಲಿ 59, ಮೇಘಾಲಯದಲ್ಲಿ 12, ಮಣಿಪುರದಲ್ಲಿ 2, ಮಿಜೋರಾಂ ಮತ್ತು ಅರುಣಾಚಲ ಪ್ರದೇಶದಲ್ಲಿ ತಲಾ ಒಂದು ಕೊರೊನಾ ಪ್ರಕರಣ ದೃಢಪಟ್ಟಿದೆ ಎಂದು ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>