2017 ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡು ತೀವ್ರವಾಗ್ವಾದಗಳಿಗೆ ಕಾರಣವಾಗಿತ್ತು. ಪೊಲೀಸರು, ಅಧಿಕಾರಿಗಳು ತನ್ನ ದೂರನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದ್ದ ಸಂತ್ರಸ್ತೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು. ಆರೋಪ ಎದುರಿಸುತ್ತಿದ್ದ ಕುಲದೀಪ್ ಸಿಂಗ್ ಮತ್ತು ಅವರ ಬೆಂಬಲಿಗರು ಸಂತ್ರಸ್ತೆಯ ತಂದೆಯ ಮೇಲೆ ತೀವ್ರ ಹಲ್ಲೆ ನಡೆಸಿದ್ದರು. ಈ ಪ್ರಕರಣದ ವಿರುದ್ದ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.