ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದರೆ, ನಮಗೂ ಅದೇ ಗತಿಯೇ: ವಿದ್ಯಾರ್ಥಿನಿ ಪ್ರಶ್ನೆ

ಲಖನೌ: ಉತ್ತರ ಪ್ರದೇಶ ಪೊಲೀಸರು ರಾಜ್ಯದ ಶಾಲೆಗಳಲ್ಲಿ ನಡೆಸುತ್ತಿರುವ ‘ಬಾಲಿಕಾ ಸುರಕ್ಷಾ ಜಾಗೃತ ಅಭಿಯಾನ’ದ ವೇಳೆ ಮುಜುಗರ ಅನುಭವಿಸಿದ್ದಾರೆ.
ಈ ಕಾರ್ಯಕ್ರಮದ ಅಂಗವಾಗಿ ಉತ್ತರ ಪ್ರದೇಶ ಉತ್ತರ ವಿಭಾಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಎಸ್.ಗೌತಮ್ ಅವರು ಬಾರಾಬಂಕಿಯ ಶಾಲೆಯಲ್ಲಿ ಉಪನ್ಯಾಸ ನೀಡುತ್ತಿದ್ದರು. ‘ಬಾಲಕಿಯರು ತೀರಾ ಜಾಗೃತರಾಗಿರಬೇಕು. ತಮ್ಮ ಮೇಲೆ ಆಗುವ ಯಾವುದೇ ದೌರ್ಜನ್ಯದ ಬಗ್ಗೆ ಗಟ್ಟಿಯಾಗಿ ಮಾತನಾಡಬೇಕು’ ಎಂದು ಅವರು ಹೇಳಿದರು.
ಉನ್ನಾವ್ ಅತ್ಯಾಚಾರ ಪ್ರಕರಣ: ಹೋರಾಟವೇ ದುಬಾರಿಯಾಯಿತೇ?
ಅವರ ಮಾತನ್ನು ಮಧ್ಯದಲ್ಲೇ ತಡೆದು, ವಿದ್ಯಾರ್ಥಿನಿಯೊಬ್ಬರು ಪ್ರಶ್ನೆ ಮುಂದಿಟ್ಟರು. ‘ನಾವು ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದರೆ, ಉನ್ನಾವ್ ಅತ್ಯಾಚಾರ ಸಂತ್ರಸ್ತೆಗೆ ಆದ ಗತಿಯೇ ನಮಗೂ ಆಗುತ್ತದೆಯೇ? ನಮಗೂ ಅಪಘಾತವಾಗುತ್ತದೆಯೇ? ನಾವು ಪ್ರತಿಭಟನೆ ನಡೆಸುವ ಮೂಲಕ ನ್ಯಾಯ ಪಡೆಯಬಹುದು ಎಂದು ನೀವು ಹೇಳುತ್ತಿದ್ದೀರಾ? ಅತ್ಯಾಚಾರದ ವಿರುದ್ಧ ಹೋರಾಡಿದ ಆ ಬಾಲಕಿ ಈಗ ಜೀವಕ್ಕಾಗಿ ಹೋರಾಡುತ್ತಿದ್ದಾಳೆ’ ಎಂದು ವಿದ್ಯಾರ್ಥಿನಿ ಹೇಳಿದರು.
ಉನ್ನಾವ್ ಅತ್ಯಾಚಾರ ಪ್ರಕರಣ: ಬಿಜೆಪಿಯಿಂದ ಕುಲದೀಪ್ ಸೆಂಗರ್ ಉಚ್ಚಾಟನೆ
ಈ ಮಾತಿಗೆ ಪ್ರತಿಕ್ರಿಯೆ ನೀಡಲು ಪೊಲೀಸ್ ಅಧಿಕಾರಿ ತಡವರಿಸಿದರು. ‘ಸಹಾಯವಾಣಿಗೆ ಬರುವ ಎಲ್ಲಾ ದೂರುಗಳಿಗೂ ನಾವು ಸ್ಪಂದಿಸುತ್ತೇವೆ’ ಎಂದಷ್ಟೇ ಹೇಳಿ ಉಪನ್ಯಾಸ ಮುಗಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.