ನವದೆಹಲಿ: ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಉನ್ನಾವ್ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಕುಲ್ದೀಪ್ಸಿಂಗ್ ಸೆಂಗರ್ ಸಲ್ಲಿಸಿರುವ ಮೇಲ್ಮನವಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸಿಬಿಐಗೆ ದೆಹಲಿ ಹೈಕೋರ್ಟ್ ಸೂಚಿಸಿದೆ.
ನ್ಯಾಯಮೂರ್ತಿಗಳಾದ ಮನ್ಮೋಹನ್ ಮತ್ತು ಸಂಗೀತಾ ಧಿಂಗ್ರಾ ಸೆಹಗಲ್ ಅವರನ್ನೊಳಗೊಂಡ ನ್ಯಾಯ ಪೀಠವು ಸೆಂಗರ್ಗೆ ದಂಡದ ಮೊತ್ತ ₹25 ಲಕ್ಷವನ್ನು ಠೇವಣಿ ಇರಿಸಲು 60 ದಿನಗಳ ಅವಕಾಶ ನೀಡಿದೆ.