<p><strong>ಲಖನೌ: </strong>ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ವ್ಯಕ್ತವಾಗುತ್ತಿರುವ ತೀವ್ರ ವಿರೋಧವನ್ನು ಲೆಕ್ಕಿಸದೇ ಉತ್ತರ ಪ್ರದೇಶ ಸರ್ಕಾರ, ಸಿಎಎ ಜಾರಿಗೆ ಮುಂದಾಗಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಇಲ್ಲಿಯವರೆಗೆ ಒಟ್ಟು 20 ಮಂದಿ ಮೃತಪಟ್ಟಿದ್ದಾರೆ.</p>.<p>ತಮ್ಮ ಜಿಲ್ಲೆಯಲ್ಲಿ ವಾಸವಿರುವ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಗಾನಿಸ್ತಾನದ ನಿರಾಶ್ರಿತರನ್ನು ಗುರುತಿಸಲು ಗೃಹ ಇಲಾಖೆಯು ಜಿಲ್ಲಾಧಿಕಾರಿಗಳಿಗೆ ಮೌಖಿಕ ನಿರ್ದೇಶನ ನೀಡಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.</p>.<p>ಮೂರು ದೇಶಗಳಿಂದ ಕಿರುಕುಳಕ್ಕೊಳಗಾಗಿ ಭಾರತಕ್ಕೆ ಬಂದ ಅಲ್ಪಸಂಖ್ಯಾತರ ಹೆಸರುಳ್ಳ ಪಟ್ಟಿಯನ್ನು ಜಿಲ್ಲಾಧಿಕಾರಿಗಳು ಸಿದ್ಧಪಡಿಸಲಿದ್ದಾರೆ. ರಾಮ್ಪುರ, ಗಾಜಿಯಾಬಾದ್, ಶಹಜಾನ್ಪುರ, ಲಖನೌ ಮುಂತಾದ ಜಿಲ್ಲೆಗಳಲ್ಲಿ ಇರುವ ವಲಸಿಗರಲ್ಲಿ ಸಿಎಎ ಅಡಿ ಭಾರತದ ಪೌರತ್ವ ಪಡೆದುಕೊಳ್ಳುವರೇ ಹೆಚ್ಚಿದ್ದಾರೆ ಎಂದು ಸರ್ಕಾರ ನಿರೀಕ್ಷಿಸಿದೆ.</p>.<p>ಸಿದ್ಧಪಡಿಸಿದ ಪಟ್ಟಿಯನ್ನು ಕೇಂದ್ರ ಗೃಹ ಇಲಾಖೆಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.ಇದರ ಜತೆ, ‘ಅಕ್ರಮವಾಗಿ ನೆಲೆಸಿರುವ ಮುಸ್ಲಿಂ ವಲಸಿಗರ’ ಬಗ್ಗೆಯೂ ಕೇಂದ್ರಕ್ಕೆ ಮಾಹಿತಿ ನೀಡಲಾಗುವುದು. ಇವರುಗಳನ್ನು ಅವರ ಮೂಲ ದೇಶಗಳಿಗೇ ಕಳುಹಿಸುವ ದೃಷ್ಟಿಯಿಂದ ಈ ಮಾಹಿತಿ ನೀಡಲಾಗುವುದು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ವ್ಯಕ್ತವಾಗುತ್ತಿರುವ ತೀವ್ರ ವಿರೋಧವನ್ನು ಲೆಕ್ಕಿಸದೇ ಉತ್ತರ ಪ್ರದೇಶ ಸರ್ಕಾರ, ಸಿಎಎ ಜಾರಿಗೆ ಮುಂದಾಗಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಇಲ್ಲಿಯವರೆಗೆ ಒಟ್ಟು 20 ಮಂದಿ ಮೃತಪಟ್ಟಿದ್ದಾರೆ.</p>.<p>ತಮ್ಮ ಜಿಲ್ಲೆಯಲ್ಲಿ ವಾಸವಿರುವ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಗಾನಿಸ್ತಾನದ ನಿರಾಶ್ರಿತರನ್ನು ಗುರುತಿಸಲು ಗೃಹ ಇಲಾಖೆಯು ಜಿಲ್ಲಾಧಿಕಾರಿಗಳಿಗೆ ಮೌಖಿಕ ನಿರ್ದೇಶನ ನೀಡಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.</p>.<p>ಮೂರು ದೇಶಗಳಿಂದ ಕಿರುಕುಳಕ್ಕೊಳಗಾಗಿ ಭಾರತಕ್ಕೆ ಬಂದ ಅಲ್ಪಸಂಖ್ಯಾತರ ಹೆಸರುಳ್ಳ ಪಟ್ಟಿಯನ್ನು ಜಿಲ್ಲಾಧಿಕಾರಿಗಳು ಸಿದ್ಧಪಡಿಸಲಿದ್ದಾರೆ. ರಾಮ್ಪುರ, ಗಾಜಿಯಾಬಾದ್, ಶಹಜಾನ್ಪುರ, ಲಖನೌ ಮುಂತಾದ ಜಿಲ್ಲೆಗಳಲ್ಲಿ ಇರುವ ವಲಸಿಗರಲ್ಲಿ ಸಿಎಎ ಅಡಿ ಭಾರತದ ಪೌರತ್ವ ಪಡೆದುಕೊಳ್ಳುವರೇ ಹೆಚ್ಚಿದ್ದಾರೆ ಎಂದು ಸರ್ಕಾರ ನಿರೀಕ್ಷಿಸಿದೆ.</p>.<p>ಸಿದ್ಧಪಡಿಸಿದ ಪಟ್ಟಿಯನ್ನು ಕೇಂದ್ರ ಗೃಹ ಇಲಾಖೆಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.ಇದರ ಜತೆ, ‘ಅಕ್ರಮವಾಗಿ ನೆಲೆಸಿರುವ ಮುಸ್ಲಿಂ ವಲಸಿಗರ’ ಬಗ್ಗೆಯೂ ಕೇಂದ್ರಕ್ಕೆ ಮಾಹಿತಿ ನೀಡಲಾಗುವುದು. ಇವರುಗಳನ್ನು ಅವರ ಮೂಲ ದೇಶಗಳಿಗೇ ಕಳುಹಿಸುವ ದೃಷ್ಟಿಯಿಂದ ಈ ಮಾಹಿತಿ ನೀಡಲಾಗುವುದು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>