<p class="title"><strong>ಬಂದಾ (ಉತ್ತರ ಪ್ರದೇಶ):</strong> ಕಂದಾಯ ಅಧಿಕಾರಿ ಹಾಗೂ ಇತರ ಇಬ್ಬರು ಸೇರಿ 18 ವರ್ಷದ ಯುವತಿಯನ್ನು ಅಪಹರಿಸಿ, ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.</p>.<p class="bodytext">ಯುವತಿ ನೀಡಿದ ದೂರಿನ ಪ್ರಕಾರ, ಕಂದಾಯ ಅಧಿಕಾರಿ ಸುಶಿ ಪಟೇಲ್ ಹಾಗೂ ಇತರ ಇಬ್ಬರು ಶನಿವಾರ ಯುವತಿಮನೆಗೆ ನುಗ್ಗಿ ಕಾರಿನಲ್ಲಿ ಎಳೆದೊಯ್ದಿದ್ದಾರೆ. ಈ ವೇಳೆ ತಡೆಯಲು ಬಂದ ತಾಯಿಯನ್ನು ಆರೋಪಿಗಳು ತಳ್ಳಿದ್ದಾರೆ. ಕಾರಿನಲ್ಲಿ ಅತ್ಯಾಚಾರ ಎಸಗಲಾಗಿದೆ ಎಂದು ಠಾಣಾಧಿಕಾರಿ ಗಿರೀಂದ್ರ ಸಿಂಗ್ ಹೇಳಿದ್ದಾರೆ.</p>.<p class="bodytext">‘ಮಾರ್ಗಮಧ್ಯೆ ರಸ್ತೆಯಲ್ಲಿ ಕುರಿಹಿಂಡು ಎದುರಾದಾಗ, ಕಾರಿನಿಂದ ಇಳಿದು ತಪ್ಪಿಸಿಕೊಂಡು ಓಡಿಬಂದೆ’ ಎಂದು ಯುವತಿತಿಳಿಸಿದ್ದಾಳೆ.</p>.<p class="bodytext">ಆಕೆ ನೀಡಿದ ದೂರಿನ ಆಧಾರದ ಮೇಲೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಬಂದಾ (ಉತ್ತರ ಪ್ರದೇಶ):</strong> ಕಂದಾಯ ಅಧಿಕಾರಿ ಹಾಗೂ ಇತರ ಇಬ್ಬರು ಸೇರಿ 18 ವರ್ಷದ ಯುವತಿಯನ್ನು ಅಪಹರಿಸಿ, ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.</p>.<p class="bodytext">ಯುವತಿ ನೀಡಿದ ದೂರಿನ ಪ್ರಕಾರ, ಕಂದಾಯ ಅಧಿಕಾರಿ ಸುಶಿ ಪಟೇಲ್ ಹಾಗೂ ಇತರ ಇಬ್ಬರು ಶನಿವಾರ ಯುವತಿಮನೆಗೆ ನುಗ್ಗಿ ಕಾರಿನಲ್ಲಿ ಎಳೆದೊಯ್ದಿದ್ದಾರೆ. ಈ ವೇಳೆ ತಡೆಯಲು ಬಂದ ತಾಯಿಯನ್ನು ಆರೋಪಿಗಳು ತಳ್ಳಿದ್ದಾರೆ. ಕಾರಿನಲ್ಲಿ ಅತ್ಯಾಚಾರ ಎಸಗಲಾಗಿದೆ ಎಂದು ಠಾಣಾಧಿಕಾರಿ ಗಿರೀಂದ್ರ ಸಿಂಗ್ ಹೇಳಿದ್ದಾರೆ.</p>.<p class="bodytext">‘ಮಾರ್ಗಮಧ್ಯೆ ರಸ್ತೆಯಲ್ಲಿ ಕುರಿಹಿಂಡು ಎದುರಾದಾಗ, ಕಾರಿನಿಂದ ಇಳಿದು ತಪ್ಪಿಸಿಕೊಂಡು ಓಡಿಬಂದೆ’ ಎಂದು ಯುವತಿತಿಳಿಸಿದ್ದಾಳೆ.</p>.<p class="bodytext">ಆಕೆ ನೀಡಿದ ದೂರಿನ ಆಧಾರದ ಮೇಲೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>