‘ಮಸೀದಿ ನಿರ್ಮಾಣ ಉದ್ದೇಶಕ್ಕಾಗಿ ಮೂರು ನಿವೇಶನಗಳನ್ನು ಗುರುತಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿತ್ತು. ಕೇಂದ್ರ ಸರ್ಕಾರ ಸದ್ಯ ದನ್ನಿಪುರ ಗ್ರಾಮದ ನಿವೇಶನಕ್ಕೆ ಒಪ್ಪಿಗೆ ನೀಡಿತ್ತು. ಅದನ್ನೇ ಮಂಜೂರು ಮಾಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಈ ನಿವೇಶನಕ್ಕೆ ಸಾರಿಗೆ ವ್ಯವಸ್ಥೆ ಉತ್ತಮವಾಗಿದ್ದು, ಕೋಮು ಸೌಹಾರ್ದ, ಕಾನೂನು ಸುವ್ಯವಸ್ಥೆ ಪರಿಪಾಲನೆಗೆ ಪ್ರಶಸ್ತವೆನಿಸುವಂತಿದೆ,’ ಎಂದು ಶ್ರೀಕಾಂತ್ ಶರ್ಮಾ ಹೇಳಿದ್ದಾರೆ.