ಲಖನೌ: ‘ಇಡೀ ರಾಷ್ಟ್ರ ಒಗ್ಗೂಡಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿದೆ. ಆದರೆ, ಉತ್ತರ ಪ್ರದೇಶ ಸರ್ಕಾರವು ವಲಸೆ ಕಾರ್ಮಿಕರಿಗಾಗಿ ಬಸ್, ರೈಲು ಟಿಕೆಟ್, ಆಹಾರ ಮತ್ತು ಪಡಿತರ ವ್ಯವಸ್ಥೆ ಮಾಡುವವರನ್ನು ಜೈಲಿಗಟ್ಟುತ್ತಿದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಆರೋಪಿಸಿದ್ದಾರೆ.