ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ಒಎನ್‌ಜಿಸಿ ಘಟಕದಲ್ಲಿ ಅಗ್ನಿ ಅವಘಡ; 4 ಮಂದಿ ಸಾವು

Last Updated 3 ಸೆಪ್ಟೆಂಬರ್ 2019, 4:36 IST
ಅಕ್ಷರ ಗಾತ್ರ

ಮುಂಬೈ: ನವಿ ಮುಂಬೈನಲ್ಲಿರುವ ಉರಣ್ಒಎನ್‌ಜಿಸಿ ಘಟಕದಲ್ಲಿ ಮಂಗಳವಾರ ಬೆಳಗ್ಗೆ 7 ಗಂಟೆಗೆ ಅಗ್ನಿ ಅವಘಡ ಸಂಭವಿಸಿದ್ದು 4 ಮಂದಿಸಾವಿಗೀಡಾಗಿದ್ದಾರೆ. ಘಟಕದೊಳಗೆ ಹಲವಾರು ಮಂದಿ ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ಹೇಳಿರುವುದಾಗಿ ನ್ಯೂಸ್ 18 ಡಾಟ್ ಕಾಮ್ ವರದಿ ಮಾಡಿದೆ.

ಅಗ್ನಿಶಾಮಕದಳದವರು ಬೆಂಕಿ ನಂದಿಸುವ ಕಾರ್ಯ ಮುಂದುವರಿಸಿದೆ.ನೀರಿನ ನಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ತಕ್ಷಣವೇ ಅಗ್ನಿ ಶಾಮಕದಳದವರು ಬಂದು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ ಎಂದು ಒಎನ್‌ಜಿಸಿ ಹೇಳಿದೆ.

ತೈಲ ಸಂಸ್ಕರಣೆ ಮೇಲೆ ಇದು ಪರಿಣಾಮ ಬೀರುವುದಿಲ್ಲ. ಈಗ ಅನಿಲವನ್ನು ಗುಜರಾತಿನ ಹಜರಿಯಾ ಘಟಕದತ್ತ ತಿರುಗಿಸಲಾಗಿದೆ ಎಂದು ಕಂಪನಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT