ವಿವಾದವನ್ನು ಎನ್ಡಿಎ ಸರ್ಕಾರವು ಹಂತಹಂತವಾಗಿ ಪರಿಹರಿಸಲಿದೆ ಎಂದು ರಾಮಜನ್ಮಭೂಮಿ ಟ್ರಸ್ಟ್ನ ಸದಸ್ಯ ಮತ್ತು ಬಿಜೆಪಿಯ ಮಾಜಿ ಸಂಸದ ರಾಮವಿಲಾಸ್ ವೇದಾಂತಿ ಹೇಳಿದ್ದಾರೆ. ‘ಮೊದಲಿಗೆ, ವಿವಾದಿತ ನಿವೇಶನವನ್ನು ಟ್ರಸ್ಟ್ಗೆ ನೀಡಬೇಕು. ಅದಾದ ಬಳಿಕ ಮಂದಿರ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ’ ಎಂದು ವೇದಾಂತಿ ಹೇಳಿದ್ದಾರೆ. ನರೇಂದ್ರ ಮೋದಿ ಅವರ ಎರಡನೇ ಅವಧಿಯಲ್ಲಿ ರಾಮ ಮಂದಿರ ನಿರ್ಮಾಣ ಆಗದಿದ್ದರೆ ದೆಹಲಿಯಲ್ಲಿ ಆತ್ಮಾಹುತಿ ಮಾಡಿಕೊಳ್ಳುವುದಾಗಿ ಸಂತ ಮಹಾಂತ ಸ್ವಾಮಿ ಪರಮಹಂಸ ದಾಸ ಅವರು ಬೆದರಿಕೆ ಒಡ್ಡಿದ್ದಾರೆ.