‘ಘಟನೆ ನಂತರ, ಸ್ನೇಹಿತೆಯನ್ನು ಡ್ರಾಪ್ ಮಾಡಲು ಬೈಕ್ನಲ್ಲಿ ಅವರ ಮನೆಯತ್ತ ಹೊರಟಿದ್ದೆ. ದುಷ್ಕರ್ಮಿಗಳು ಪುನಃಗುಂಪು ಕಟ್ಟಿಕೊಂಡು ಬಂದು ನನ್ನ ಬೈಕ್ ತಡೆದಿದ್ದರು. ನಂತರ, ಜಗಳ ತೆಗೆದು ಕಲ್ಲಿನಿಂದ ಹೊಡೆದು ಕೊಲೆಗೆ ಯತ್ನಿಸಿದರು. ಜಗಳ ಬಿಡಿಸಲು ಬಂದಿದ್ದ ಸ್ನೇಹಿತೆಯ ಮೇಲೂ ಹಲ್ಲೆ ನಡೆಸಿದರು. ನಮ್ಮ ಚೀರಾಟ ಕೇಳಿ ಸ್ಥಳೀಯರು ಸಹಾಯಕ್ಕೆ ಬರುವಷ್ಟರಲ್ಲಿ ಆರೋಪಿಗಳು ಪರಾರಿಯಾದರು. ನಂತರ, ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡೆವು’ ಎಂದು ಯುವಕ ಹೇಳಿರುವುದಾಗಿ ಪೊಲೀಸರು ವಿವರಿಸಿದರು.