ಲಖನೌ, ಗೌತಮ್ ಬುದ್ಧ ನಗರ, ನೋಯ್ಡಾ, ಗಾಜಿಯಾಬಾದ್, ಮೀರತ್, ಆಗ್ರಾ, ಶಾಮ್ಲಿ ಹಾಗೂ ಸಹರಾಪುರ ಸೇರಿದಂತೆ 15 ಜಿಲ್ಲೆಗಳಲ್ಲಿಸಂಪೂರ್ಣ ದಿಗ್ಭಂಧನ ವಿಧಿಸಲಾಗಿದೆ. ಅಗತ್ಯ ಸಾಮಗ್ರಿಗಳ ಹೋಂ ಡೆಲಿವರಿಗೆ ಹಾಗೂ ವೈದ್ಯಕೀಯ ತಂಡಗಳಿಗೆ ಮಾತ್ರ ಈ ಜಿಲ್ಲೆಗಳಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ. ಕೋವಿಡ್–19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಸೋಂಕು ಸಮುದಾಯಗಳಿಗೆ ವ್ಯಾಪಿಸುವುದನ್ನು ನಿಯಂತ್ರಿಸಲು ಈ ಕ್ರಮ ವಹಿಸಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಆರ್.ಕೆ.ತಿವಾರಿ ಹೇಳಿದ್ದಾರೆ.