ಲಖನೌ: ಉತ್ತರ ಪ್ರದೇಶದ ಬಜೆಟ್ ಜಂಟಿ ಅಧಿವೇಶನದ ಮೊದಲ ದಿನವಾದ ಮಂಗಳವಾರ ವಿರೋಧ ಪಕ್ಷಗಳು ರಾಜ್ಯಪಾಲರ ಭಾಷಣಕ್ಕೆ ಅಡ್ಡಿ ಪಡಿಸಿದವು. ‘ರಾಜ್ಯಪಾಲರೇ ವಾಪಸ್ ಹೋಗಿ’ ಎಂದು ಘೋಷಣೆ ಕೂಗುತ್ತಾ, ಕಾಗದದ ತುಂಡುಗಳನ್ನು ಪೋಡಿಯಂನತ್ತ ಎಸೆದು ವಿರೋಧ ಪಕ್ಷಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.
ತಮ್ಮ 55 ನಿಮಿಷಗಳ ಭಾಷಣದಲ್ಲಿ ಸರ್ಕಾರ ಕೈಗೊಂಡಿರುವ ಜನಕಲ್ಯಾಣ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ರಾಜ್ಯಪಾಲ ರಾಮ್ ನಾಯ್ಕ್ ಪ್ರಸ್ತಾಪಿಸಿದರು. ಅಲ್ಲದೆ, ಅಲಹಾಬಾದ್ ಮತ್ತು ಫೈಜಾಬಾದ್ ಜಿಲ್ಲೆಗಳ ಹೆಸರು ಬದಲಿಸಿದ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.
ವಿರೋಧಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಭಾಷಣಕ್ಕೆ ಅಡ್ಡಿ ಉಂಟು ಮಾಡಿದರು.