<p><strong>ಲಖನೌ:</strong> ಇನ್ನು ಮುಂದೆ ಯಾವುದೇ ರಾಜ್ಯದವರು ಉತ್ತರ ಪ್ರದೇಶದಿಂದ ವಲಸೆ ಕಾರ್ಮಿಕರನ್ನು ಕರೆದೊಯ್ಯಬೇಕಿದ್ದರೆ ಸರ್ಕಾರದ ಅನುಮತಿ ಅಗತ್ಯ. ಅವರ ಸಾಮಾಜಿಕ, ಕಾನೂನು ರೀತ್ಯಾ ಮತ್ತು ವಿತ್ತೀಯ ಹಕ್ಕುಗಳನ್ನು ನಾವು ಖಾತರಿಪಡಿಸಬೇಕಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.</p>.<p>ಕೊರೊನಾ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಜಾರಿಯಲ್ಲಿರುವ ಲಾಕ್ಡೌನ್ ವೇಳೆ ಸಂಕಷ್ಟದಲ್ಲಿರುವ ಉತ್ತರ ಪ್ರದೇಶ ಮೂಲದ ವಲಸೆ ಕಾರ್ಮಿಕರನ್ನು ವಿವಿಧ ರಾಜ್ಯಗಳು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಯೋಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಈ ವಲಸೆ ಕಾರ್ಮಿಕರು ನಮ್ಮ ಅತಿ ದೊಡ್ಡ ಸಂಪನ್ಮೂಲ. ಇವರಿಗೆ ನಾವು ಉದ್ಯೋಗ ಒದಗಿಸಿಕೊಡುತ್ತೇವೆ. ಅದಕ್ಕಾಗಿ ಆಯೋಗವೊಂದನ್ನು ರಚಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/uttar-pradesh-readies-plan-to-provide-jobs-to-20-lakh-returning-migrants-726555.html" target="_blank">20 ಲಕ್ಷ ವಲಸೆ ಕಾರ್ಮಿಕರಿಗೆ ಉದ್ಯೋಗ ದೊರಕಿಸಿಕೊಡಲು ಉತ್ತರ ಪ್ರದೇಶ ಸರ್ಕಾರ ಯೋಜನೆ</a></p>.<p>‘ಅವರು ನಮ್ಮವರು. ಬೇರೆ ರಾಜ್ಯದವರು ಅವರನ್ನು ಮತ್ತೆ ಕರೆದೊಯ್ಯಬೇಕಾದರೆ ಉತ್ತರ ಪ್ರದೇಶ ಸರ್ಕಾರದ ಅನುಮತಿ ಕೋರಬೇಕು’ ಎಂದು ಆರ್ಎಸ್ಎಸ್ನ ನಿಯತಕಾಲಿಕೆ ‘ಪಾಂಚಜನ್ಯ’ ಮತ್ತು ‘ಆರ್ಗನೈಸರ್’ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡುವ ವೇಳೆ ಯೋಗಿ ಹೇಳಿದ್ದಾರೆ.</p>.<p>ಉತ್ತರ ಪ್ರದೇಶಕ್ಕೆ ವಾಪಸಾಗಿರುವ ವಲಸೆ ಕಾರ್ಮಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಅವರ ಹಕ್ಕುಗಳನ್ನು ರಕ್ಷಿಸಲು ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.</p>.<p>‘ಎಲ್ಲ ವಲಸೆ ಕಾರ್ಮಿಕರನ್ನು ನೋಂದಣಿ ಮಾಡಿಸಿಕೊಳ್ಳಲಾಗುತ್ತಿದೆ. ಅವರ ಕೌಶಲ ಏನೆಂಬುದನ್ನೂ ದಾಖಲು ಮಾಡಿಕೊಳ್ಳಲಾಗುತ್ತಿದೆ. ಅವರನ್ನು ಕೆಲಸಕ್ಕೆ ಕರೆದೊಯ್ಯಲು ಬಯಸುವ ರಾಜ್ಯಗಳು ಅವರ ಸಾಮಾಜಿಕ, ಕಾನೂನು ರೀತ್ಯಾ ಮತ್ತು ಆರ್ಥಿಕ ಭದ್ರತೆಯನ್ನು ಖಾತರಿಪಡಿಸಬೇಕು’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಇನ್ನು ಮುಂದೆ ಯಾವುದೇ ರಾಜ್ಯದವರು ಉತ್ತರ ಪ್ರದೇಶದಿಂದ ವಲಸೆ ಕಾರ್ಮಿಕರನ್ನು ಕರೆದೊಯ್ಯಬೇಕಿದ್ದರೆ ಸರ್ಕಾರದ ಅನುಮತಿ ಅಗತ್ಯ. ಅವರ ಸಾಮಾಜಿಕ, ಕಾನೂನು ರೀತ್ಯಾ ಮತ್ತು ವಿತ್ತೀಯ ಹಕ್ಕುಗಳನ್ನು ನಾವು ಖಾತರಿಪಡಿಸಬೇಕಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.</p>.<p>ಕೊರೊನಾ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಜಾರಿಯಲ್ಲಿರುವ ಲಾಕ್ಡೌನ್ ವೇಳೆ ಸಂಕಷ್ಟದಲ್ಲಿರುವ ಉತ್ತರ ಪ್ರದೇಶ ಮೂಲದ ವಲಸೆ ಕಾರ್ಮಿಕರನ್ನು ವಿವಿಧ ರಾಜ್ಯಗಳು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಯೋಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಈ ವಲಸೆ ಕಾರ್ಮಿಕರು ನಮ್ಮ ಅತಿ ದೊಡ್ಡ ಸಂಪನ್ಮೂಲ. ಇವರಿಗೆ ನಾವು ಉದ್ಯೋಗ ಒದಗಿಸಿಕೊಡುತ್ತೇವೆ. ಅದಕ್ಕಾಗಿ ಆಯೋಗವೊಂದನ್ನು ರಚಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/uttar-pradesh-readies-plan-to-provide-jobs-to-20-lakh-returning-migrants-726555.html" target="_blank">20 ಲಕ್ಷ ವಲಸೆ ಕಾರ್ಮಿಕರಿಗೆ ಉದ್ಯೋಗ ದೊರಕಿಸಿಕೊಡಲು ಉತ್ತರ ಪ್ರದೇಶ ಸರ್ಕಾರ ಯೋಜನೆ</a></p>.<p>‘ಅವರು ನಮ್ಮವರು. ಬೇರೆ ರಾಜ್ಯದವರು ಅವರನ್ನು ಮತ್ತೆ ಕರೆದೊಯ್ಯಬೇಕಾದರೆ ಉತ್ತರ ಪ್ರದೇಶ ಸರ್ಕಾರದ ಅನುಮತಿ ಕೋರಬೇಕು’ ಎಂದು ಆರ್ಎಸ್ಎಸ್ನ ನಿಯತಕಾಲಿಕೆ ‘ಪಾಂಚಜನ್ಯ’ ಮತ್ತು ‘ಆರ್ಗನೈಸರ್’ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡುವ ವೇಳೆ ಯೋಗಿ ಹೇಳಿದ್ದಾರೆ.</p>.<p>ಉತ್ತರ ಪ್ರದೇಶಕ್ಕೆ ವಾಪಸಾಗಿರುವ ವಲಸೆ ಕಾರ್ಮಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಅವರ ಹಕ್ಕುಗಳನ್ನು ರಕ್ಷಿಸಲು ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.</p>.<p>‘ಎಲ್ಲ ವಲಸೆ ಕಾರ್ಮಿಕರನ್ನು ನೋಂದಣಿ ಮಾಡಿಸಿಕೊಳ್ಳಲಾಗುತ್ತಿದೆ. ಅವರ ಕೌಶಲ ಏನೆಂಬುದನ್ನೂ ದಾಖಲು ಮಾಡಿಕೊಳ್ಳಲಾಗುತ್ತಿದೆ. ಅವರನ್ನು ಕೆಲಸಕ್ಕೆ ಕರೆದೊಯ್ಯಲು ಬಯಸುವ ರಾಜ್ಯಗಳು ಅವರ ಸಾಮಾಜಿಕ, ಕಾನೂನು ರೀತ್ಯಾ ಮತ್ತು ಆರ್ಥಿಕ ಭದ್ರತೆಯನ್ನು ಖಾತರಿಪಡಿಸಬೇಕು’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>