‘ಗೋಮತಿ ನಗರದಲ್ಲಿರುವ ಕಟ್ಟಡದ ಮೂರನೇ ಮಹಡಿಯಿಂದ ಪಾಂಡೆ ಜಿಗಿದಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆಗೆ ಆದೇಶಿಸಲಾಗಿದೆ. ತಮ್ಮ ಕಿರಿಯ ಸಹೋದ್ಯೋಗಿಯನ್ನು ಭೇಟಿ ಮಾಡಲು ಬಂದಿದ್ದ ಸಂದರ್ಭ ಮಧ್ಯಾಹ್ಯ 1.45ರ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಕೀಲರು ಈ ನಿರ್ಧಾರ ಕೈಗೊಳ್ಳಲು ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ’ ಎಂದು ವಿಭುತಿ ಖಂಡ್ ಪ್ರದೇಶದ ಇನ್ಸ್ಪೆಕ್ಟರ್ ಮಥುರಾ ರೈ ಹೇಳಿದರು.