<p><strong>ಲಖನೌ: </strong>ಶ್ರಮಿಕ್ ರೈಲುಗಳಲ್ಲಿ ತೆರಳುತ್ತಿದ್ದ ವಲಸೆ ಕಾರ್ಮಿಕರು ಆಹಾರ, ನೀರು ಸಿಗದೆ ಉತ್ತರ ಪ್ರದೇಶದ ಹಲವು ರೈಲು ನಿಲ್ದಾಣಗಳಲ್ಲಿ ಆಹಾರ ಪೊಟ್ಟಣಗಳು ಮತ್ತು ಕಚೇರಿಗಳನ್ನು ದೋಚಿರುವುದು ಬೆಳಕಿಗೆ ಬಂದಿದೆ.</p>.<p>ಶುಕ್ರವಾರ ನೂರಕ್ಕೂ ಹೆಚ್ಚು ವಲಸೆ ಕಾರ್ಮಿಕರು ಚಂದೌಲಿ ಜಿಲ್ಲೆಯ ದೀನ್ ದಯಾಳ್ ಉಪಾಧ್ಯಾಯ ರೈಲು ನಿಲ್ದಾಣದಲ್ಲಿ ರೈಲು ಹಳಿಗಳ ಮೇಲೆ ಕುಳಿತಿದ್ದು, ರೈಲು ಸಂಚಾರಕ್ಕೆ ತಡೆಯೊಡ್ಡಿದ್ದಾರೆ. ಇದರಿಂದ ವಿಶಾಖಪಟ್ಟಣ– ಛಾಪ್ರಾ ಶ್ರಮಿಕ್ ರೈಲು ಹತ್ತು ಗಂಟೆಗಳವರೆಗೆ ನಿಲ್ದಾಣದಲ್ಲಿ ನಿಂತಿತ್ತು.</p>.<p>‘48 ಗಂಟೆಗಳಿಂದ ಕಾರ್ಮಿಕರಿಗೆ ಆಹಾರ ಮತ್ತು ನೀರು ಇಲ್ಲದಾಗಿದೆ. ಹೀಗಾಗಿ ಆಕ್ರೋಶಗೊಂಡಿರುವ ಕಾರ್ಮಿಕರು ರೈಲು ಸಂಚಾರವನ್ನು ತಡೆಯಲು ರೈಲಿನ ಸೀಟ್ಗಳನ್ನು ಹಳಿಗಳ ಮೇಲೆ ಎಸೆದಿದ್ದಾರೆ’ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/indian-railways-to-operate-2600-shramik-special-trains-in-10-days-to-help-migrant-workers-730223.html" itemprop="url">ಮುಂದಿನ ಹತ್ತು ದಿನಗಳಲ್ಲಿ ಸಂಚರಿಸಲಿವೆ ಇನ್ನೂ 2600 ಶ್ರಮಿಕ ವಿಶೇಷ ರೈಲುಗಳು</a></p>.<p>ಪನ್ವೆಲ್– ಜೌನ್ಪುರ ಶ್ರಮಿಕ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವಲಸೆ ಕಾರ್ಮಿಕರು ಕಿಟಕಿ, ಗಾಜುಗಳನ್ನು ಒಡೆದಿದ್ದಾರೆ. ಇದರಿಂದ ವಾರಾಣಸಿ ಸಮೀಪದ ವ್ಯಾಸ್ನಗರ ನಿಲ್ದಾಣದಲ್ಲಿ ಹಲವು ಗಂಟೆಗಳ ರೈಲು ನಿಂತಿತ್ತು. ಬೆಂಗಳೂರು – ದರ್ಬಾಂಗ ಶ್ರಮಿಕ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕಾರ್ಮಿಕರೂ ಅಜ್ಗೈನ್, ಸೋನಿಕ್, ಉನ್ನಾವೊ ರೈಲು ನಿಲ್ದಾಣಗಳ ಕಚೇರಿಗಳನ್ನು ದೋಚಿದ್ದಾರೆ. ‘ನಾವು ಎರಡು ದಿನಗಳಿಂದ ಪ್ರಯಾಣಿಸುತ್ತಿದ್ದೇವೆ. ನಮ್ಮೊಂದಿಗೆ ಮಕ್ಕಳಿದ್ದು, ಆಹಾರ ಮತ್ತು ನೀರು ಸೌಲಭ್ಯ ಇಲ್ಲ’ ಎಂದು ಕಾರ್ಮಿಕರೊಬ್ಬರು ಹೇಳಿದ್ದಾರೆ.</p>.<p>‘ಅಹಮದಾಬಾದ್–ಸೀತಾಮದೀ ಶ್ರಮಿಕ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕಾರ್ಮಿಕರು ಹಸಿವು ತಾಳದೇ ಕಾನ್ಪುರ ರೈಲು ನಿಲ್ದಾಣದಲ್ಲಿ ಆಹಾರ ಪೊಟ್ಟಣಗಳು ಮತ್ತು ನೀರಿನ ಬಾಟಲ್ಗಳನ್ನು ದೋಚಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಶ್ರಮಿಕ್ ರೈಲುಗಳಲ್ಲಿ ತೆರಳುತ್ತಿದ್ದ ವಲಸೆ ಕಾರ್ಮಿಕರು ಆಹಾರ, ನೀರು ಸಿಗದೆ ಉತ್ತರ ಪ್ರದೇಶದ ಹಲವು ರೈಲು ನಿಲ್ದಾಣಗಳಲ್ಲಿ ಆಹಾರ ಪೊಟ್ಟಣಗಳು ಮತ್ತು ಕಚೇರಿಗಳನ್ನು ದೋಚಿರುವುದು ಬೆಳಕಿಗೆ ಬಂದಿದೆ.</p>.<p>ಶುಕ್ರವಾರ ನೂರಕ್ಕೂ ಹೆಚ್ಚು ವಲಸೆ ಕಾರ್ಮಿಕರು ಚಂದೌಲಿ ಜಿಲ್ಲೆಯ ದೀನ್ ದಯಾಳ್ ಉಪಾಧ್ಯಾಯ ರೈಲು ನಿಲ್ದಾಣದಲ್ಲಿ ರೈಲು ಹಳಿಗಳ ಮೇಲೆ ಕುಳಿತಿದ್ದು, ರೈಲು ಸಂಚಾರಕ್ಕೆ ತಡೆಯೊಡ್ಡಿದ್ದಾರೆ. ಇದರಿಂದ ವಿಶಾಖಪಟ್ಟಣ– ಛಾಪ್ರಾ ಶ್ರಮಿಕ್ ರೈಲು ಹತ್ತು ಗಂಟೆಗಳವರೆಗೆ ನಿಲ್ದಾಣದಲ್ಲಿ ನಿಂತಿತ್ತು.</p>.<p>‘48 ಗಂಟೆಗಳಿಂದ ಕಾರ್ಮಿಕರಿಗೆ ಆಹಾರ ಮತ್ತು ನೀರು ಇಲ್ಲದಾಗಿದೆ. ಹೀಗಾಗಿ ಆಕ್ರೋಶಗೊಂಡಿರುವ ಕಾರ್ಮಿಕರು ರೈಲು ಸಂಚಾರವನ್ನು ತಡೆಯಲು ರೈಲಿನ ಸೀಟ್ಗಳನ್ನು ಹಳಿಗಳ ಮೇಲೆ ಎಸೆದಿದ್ದಾರೆ’ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/indian-railways-to-operate-2600-shramik-special-trains-in-10-days-to-help-migrant-workers-730223.html" itemprop="url">ಮುಂದಿನ ಹತ್ತು ದಿನಗಳಲ್ಲಿ ಸಂಚರಿಸಲಿವೆ ಇನ್ನೂ 2600 ಶ್ರಮಿಕ ವಿಶೇಷ ರೈಲುಗಳು</a></p>.<p>ಪನ್ವೆಲ್– ಜೌನ್ಪುರ ಶ್ರಮಿಕ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವಲಸೆ ಕಾರ್ಮಿಕರು ಕಿಟಕಿ, ಗಾಜುಗಳನ್ನು ಒಡೆದಿದ್ದಾರೆ. ಇದರಿಂದ ವಾರಾಣಸಿ ಸಮೀಪದ ವ್ಯಾಸ್ನಗರ ನಿಲ್ದಾಣದಲ್ಲಿ ಹಲವು ಗಂಟೆಗಳ ರೈಲು ನಿಂತಿತ್ತು. ಬೆಂಗಳೂರು – ದರ್ಬಾಂಗ ಶ್ರಮಿಕ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕಾರ್ಮಿಕರೂ ಅಜ್ಗೈನ್, ಸೋನಿಕ್, ಉನ್ನಾವೊ ರೈಲು ನಿಲ್ದಾಣಗಳ ಕಚೇರಿಗಳನ್ನು ದೋಚಿದ್ದಾರೆ. ‘ನಾವು ಎರಡು ದಿನಗಳಿಂದ ಪ್ರಯಾಣಿಸುತ್ತಿದ್ದೇವೆ. ನಮ್ಮೊಂದಿಗೆ ಮಕ್ಕಳಿದ್ದು, ಆಹಾರ ಮತ್ತು ನೀರು ಸೌಲಭ್ಯ ಇಲ್ಲ’ ಎಂದು ಕಾರ್ಮಿಕರೊಬ್ಬರು ಹೇಳಿದ್ದಾರೆ.</p>.<p>‘ಅಹಮದಾಬಾದ್–ಸೀತಾಮದೀ ಶ್ರಮಿಕ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕಾರ್ಮಿಕರು ಹಸಿವು ತಾಳದೇ ಕಾನ್ಪುರ ರೈಲು ನಿಲ್ದಾಣದಲ್ಲಿ ಆಹಾರ ಪೊಟ್ಟಣಗಳು ಮತ್ತು ನೀರಿನ ಬಾಟಲ್ಗಳನ್ನು ದೋಚಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>