‘ಸುಮಾರು 10 ಸಾವಿರ ವಲಸೆ ಕಾರ್ಮಿಕರಿಗೆ ನೀರಿನ ಬಾಟಲ್ ಮತ್ತು ಆಹಾರ ವಿತರಿಸಿದ್ದೇವೆ. ಮೇ 31ರ ವರೆಗೂ ಈ ತಾತ್ಕಾಲಿಕ ಅಡುಗೆಮನೆ ಕಾರ್ಯನಿರ್ವಹಿಸಲಿದೆ. ಪ್ರತಿ ದಿನ 10 ಸಾವಿರದಿಂದ 12 ಸಾವಿರದ ವರೆಗೆ ಬಡ ವಲಸೆ ಕಾರ್ಮಿಕರಿಗೆ ಆಹಾರ ವಿತರಿಸುವುದು ನಮ್ಮ ಗುರಿಯಾಗಿದೆ. 400 ಸ್ವಯಂಸೇವಕರು ಇದಕ್ಕಾಗಿ ಶ್ರಮಿಸುತ್ತಿದ್ದಾರೆ’ ಎಂದು ಆರ್ಎಸ್ಎಸ್ನ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಜೈನ್ ತಿಳಿಸಿದ್ದಾರೆ.