<p><strong>ಲಖನೌ:</strong> ನಗರದ ಹಜರತ್ಗಂಜ್ ಪ್ರದೇಶದಲ್ಲಿ ಭಾನುವಾರ ಅಖಿಲ ಭಾರತಹಿಂದೂ ಮಹಾಸಭಾಅಧ್ಯಕ್ಷ ರಂಜೀತ್ ಬಚ್ಚನ್ ಅವರನ್ನು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.</p>.<p>ಗೋರಖ್ಪುರ ಜಿಲ್ಲೆಯ ನಿವಾಸಿ ರಂಜೀತ್ ಬಚ್ಚನ್ ಸಹಚರನೊಂದಿಗೆ ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದಾಗ ಸೆಂಟ್ರಲ್ ಡ್ರಗ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ (ಸಿಡಿಆರ್ಐ) ಕಟ್ಟಡದ ಬಳಿ ಆಗಂತುಕರುಕೃತ್ಯ ನಡೆಸಿ ಪರಾರಿಯಾಗಿದ್ದಾರೆ.</p>.<p>ದುಷ್ಕರ್ಮಿಗಳು ಬಚ್ಚನ್ ತಲೆಗೆ ಗುಂಡು ಹಾರಿಸಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಾಳಿ ಬಳಿಕ ಆರೋಪಿಗಳುಬಚ್ಚನ್ ಬಳಿ ಇದ್ದ ಚಿನ್ನದ ಸರ ಹಾಗೂ ಮೊಬೈಲ್ ಫೋನ್ಕಸಿದುಕೊಳ್ಳಲುಪ್ರಯತ್ನಿಸಿದ್ದಾರೆ ಎಂದು ತನಿಖಾ ತಂಡದ ಸಬ್ಇನ್ಸ್ಪೆಕ್ಟರ್ ತಿಳಿಸಿದ್ದಾರೆ.</p>.<p>ರಂಜಿತ್ ಬಚ್ಚನ್ ಅವರ ತಲೆಗೆ ಗುಂಡು ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಮತ್ತೊಬ್ಬ ವ್ಯಕ್ತಿ ಆಪಾಯದಿಂದ ಪಾರಾಗಿದ್ದಾನೆ ಎಂದು ಲಖನೌ ಕೇಂದ್ರ ವಿಭಾಗದ ಪೊಲೀಸ್ ಆಯುಕ್ತ ದಿನೇಶ್ ಸಿಂಗ್ ಹೇಳಿದ್ದಾರೆ.</p>.<p>ಪ್ರಕರಣ ಸಂಬಂಧ ಸ್ಥಳದಲ್ಲಿ ವಿಧಿವಿಜ್ಞಾನ ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ.ಪ್ರಕರಣದ ತನಿಖೆ ಮತ್ತು ಆರೋಪಿಗಳ ಪತ್ತೆಗಾಗಿ ಆರು ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಇತ್ತೀಚಿನ ದಿನಗಳಲ್ಲಿ ಲಖನೌದಲ್ಲಿ ನಡೆದ ಬಲಪಂಥೀಯ ಹಿಂದೂ ನಾಯಕನ ಎರಡನೇ ಹತ್ಯೆ ಇದಾಗಿದೆ.</p>.<p>ಹಿಂದೂ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಕಮಲೇಶ್ ತಿವಾರಿ ಅವರನ್ನು ಕಳೆದ ಅಕ್ಟೋಬರ್ನಲ್ಲಿ ಹತ್ಯೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ನಗರದ ಹಜರತ್ಗಂಜ್ ಪ್ರದೇಶದಲ್ಲಿ ಭಾನುವಾರ ಅಖಿಲ ಭಾರತಹಿಂದೂ ಮಹಾಸಭಾಅಧ್ಯಕ್ಷ ರಂಜೀತ್ ಬಚ್ಚನ್ ಅವರನ್ನು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.</p>.<p>ಗೋರಖ್ಪುರ ಜಿಲ್ಲೆಯ ನಿವಾಸಿ ರಂಜೀತ್ ಬಚ್ಚನ್ ಸಹಚರನೊಂದಿಗೆ ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದಾಗ ಸೆಂಟ್ರಲ್ ಡ್ರಗ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ (ಸಿಡಿಆರ್ಐ) ಕಟ್ಟಡದ ಬಳಿ ಆಗಂತುಕರುಕೃತ್ಯ ನಡೆಸಿ ಪರಾರಿಯಾಗಿದ್ದಾರೆ.</p>.<p>ದುಷ್ಕರ್ಮಿಗಳು ಬಚ್ಚನ್ ತಲೆಗೆ ಗುಂಡು ಹಾರಿಸಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಾಳಿ ಬಳಿಕ ಆರೋಪಿಗಳುಬಚ್ಚನ್ ಬಳಿ ಇದ್ದ ಚಿನ್ನದ ಸರ ಹಾಗೂ ಮೊಬೈಲ್ ಫೋನ್ಕಸಿದುಕೊಳ್ಳಲುಪ್ರಯತ್ನಿಸಿದ್ದಾರೆ ಎಂದು ತನಿಖಾ ತಂಡದ ಸಬ್ಇನ್ಸ್ಪೆಕ್ಟರ್ ತಿಳಿಸಿದ್ದಾರೆ.</p>.<p>ರಂಜಿತ್ ಬಚ್ಚನ್ ಅವರ ತಲೆಗೆ ಗುಂಡು ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಮತ್ತೊಬ್ಬ ವ್ಯಕ್ತಿ ಆಪಾಯದಿಂದ ಪಾರಾಗಿದ್ದಾನೆ ಎಂದು ಲಖನೌ ಕೇಂದ್ರ ವಿಭಾಗದ ಪೊಲೀಸ್ ಆಯುಕ್ತ ದಿನೇಶ್ ಸಿಂಗ್ ಹೇಳಿದ್ದಾರೆ.</p>.<p>ಪ್ರಕರಣ ಸಂಬಂಧ ಸ್ಥಳದಲ್ಲಿ ವಿಧಿವಿಜ್ಞಾನ ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ.ಪ್ರಕರಣದ ತನಿಖೆ ಮತ್ತು ಆರೋಪಿಗಳ ಪತ್ತೆಗಾಗಿ ಆರು ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಇತ್ತೀಚಿನ ದಿನಗಳಲ್ಲಿ ಲಖನೌದಲ್ಲಿ ನಡೆದ ಬಲಪಂಥೀಯ ಹಿಂದೂ ನಾಯಕನ ಎರಡನೇ ಹತ್ಯೆ ಇದಾಗಿದೆ.</p>.<p>ಹಿಂದೂ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಕಮಲೇಶ್ ತಿವಾರಿ ಅವರನ್ನು ಕಳೆದ ಅಕ್ಟೋಬರ್ನಲ್ಲಿ ಹತ್ಯೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>