ನವದೆಹಲಿ:ವಂದೇ ಭಾರತ್ ಮಿಷನ್ ಅಡಿಯಲ್ಲಿ,800ಕ್ಕೂ ಹೆಚ್ಚು ಭಾರತೀಯ ನಾಗರಿಕರನ್ನು ದೋಹಾ, ಸ್ಯಾನ್ ಫ್ರಾನ್ಸಿಸ್ಕೊ, ಮೆಲ್ಬೋರ್ನ್ ಮತ್ತು ಸಿಡ್ನಿಯಿಂದಸೋಮವಾರ ಕರೆತರಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
'833 ಭಾರತೀಯ ನಾಗರಿಕರು 2020ರ ಮೇ 25 ರಂದು ದೋಹಾ, ಸ್ಯಾನ್ ಫ್ರಾನ್ಸಿಸ್ಕೊ, ಮೆಲ್ಬೋರ್ನ್ ಮತ್ತು ಸಿಡ್ನಿಯಿಂದ ದೆಹಲಿ, ಗಯಾ, ಕೊಚ್ಚಿನ್ ಮತ್ತು ಅಹಮದಾಬಾದ್ಗೆ ನಾಲ್ಕು ವಿಮಾನಗಳಲ್ಲಿ ಮರಳಿದ್ದಾರೆ' ಎಂದು ಪುರಿ ಸೋಮವಾರ ಟ್ವೀಟ್ ಮಾಡಿದ್ದಾರೆ.
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಹೇರಲಾಗಿದ್ದ ಲಾಕ್ಡೌನ್ನಿಂದಾಗಿ ವಿದೇಶದಲ್ಲಿ ಉಳಿದಿದ್ದ ಭಾರತೀಯರನ್ನು ಸ್ಥಳಾಂತರಿಸಲು ಕೇಂದ್ರ ಸರ್ಕಾರ ವಂದೇ ಭಾರತ್ ಮಿಷನ್ನ ಮೊದಲ ಹಂತವನ್ನು ಮೇ 7 ರಂದು ಪ್ರಾರಂಭಿಸಿತು.
ವಂದೇ ಭಾರತ್ ಮಿಷಿನ್ ಅಡಿಯಲ್ಲಿ ಈವರೆಗೆ 20 ಸಾವಿರ ಭಾರತೀಯ ನಾಗರಿಕರನ್ನು ದೇಶಕ್ಕೆ ಕರೆತರಲಾಗಿದೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಕಳೆದ ವಾರ ಪುರಿ ತಿಳಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.