ಕಳೆದ 14 ವರ್ಷಗಳಿಂದ ತಿಂಗಳ ಮೊದಲ ದಿನ ಸರ್ಕಾರಿ ನೌಕರರು ವಂದೇ ಮಾತರಂ ಅನ್ನು ಸಚಿವಾಲಯದ ಮುಂದೆ ಹಾಡುತ್ತಿದ್ದರು.ಆದರೆ, ಈ ಬಾರಿ ನಡೆದ ಚುನಾವಣೆಯಲ್ಲಿ ಗೆದ್ದು ಬಂದು ಸರ್ಕಾರ ರಚಿಸಿದ ಕಾಂಗ್ರೆಸ್, ವಂದೇ ಮಾತರಂ ಹಾಡುವ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟಿತು. ಈ ಕ್ರಮದಿಂದ ವ್ಯಗ್ರಗೊಂಡ ಬಿಜೆಪಿ ಪಾಳೆಯ, ಮುಸ್ಲಿಮರನ್ನು ಓಲೈಸುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಇಂತಹ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿತಲ್ಲದೇ, ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿತ್ತು.