‘ಸಾವರ್ಕರ್ ಅವರನ್ನು ಸಮರ್ಥಿಸಿಕೊಳ್ಳಲು ರಂಜಿತ್ ಅವರು ಟಿ.ವಿ ಚರ್ಚೆಗಳಲ್ಲಿ ಭಾಗವಹಿಸುತ್ತಿದ್ದರು. ಮಾನಸಿಕ ಒತ್ತಡ ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಅವರ ರಕ್ತದೊತ್ತಡ ಕಳೆದ ರಾತ್ರಿ 220 ಇತ್ತು. ಹೀಗಾಗಿ ಅವರು ಮಹಿಮ್ನ ರಹೇಜಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಆರೋಗ್ಯ ಸ್ಥಿರವಾಗಿದೆ,’ ಎಂದು ಮೂಲಗಳು ತಿಳಿಸಿವೆ.