<p><strong>ಕೃಷ್ಣಗಿರಿ (ತಮಿಳುನಾಡು): </strong>ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಲವು ದಶಕಗಳಕಾಲ ಭೀತಿ ಹುಟ್ಟಿಸಿದ್ದ ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯಾ ರಾಣಿ ಕೃಷ್ಣಗಿರಿ ಜಿಲ್ಲೆಯಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಸೇರಿದ್ದಾರೆ.</p>.<p>ಇವರೊಂದಿಗೆ ಪಾಟ್ರಾಳಿ ಮಕ್ಕಳ್ ಕಚ್ಚಿಯ 1000ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರಳಿಧರ ರಾವ್ ನೇತೃತ್ವದಲ್ಲಿ ಪಕ್ಷ ಸೇರಿದರು.</p>.<p>‘ವೃತ್ತಿಯಿಂದ ವಕೀಲೆಯಾಗಿರುವ, ಸಾಮಾಜಿಕ ಹೋರಾಟಗಾರ್ತಿಯೂ ಆಗಿರುವ ವಿದ್ಯಾರಾಣಿ ತಮ್ಮ ನಿರ್ಧಾರದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ‘ಮೋದಿ ಅವರ ಕಾರ್ಯ ಶೈಲಿಗೆ ನಾನು ಮನಸೋತಿದ್ದೇನೆ. ಅವರ ಸ್ಫೂರ್ತಿಯಿಂದಲೇ ನಾನು ಬಿಜೆಪಿ ಸೇರಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ.</p>.<p>‘ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರನ್ನು ಎರಡು ವರ್ಗಳ ಹಿಂದೆ ಭೇಟಿ ಮಾಡಿದ್ದೆ. ಆಗ ಅವರು ನನ್ನನ್ನು ಬಿಜೆಪಿ ಸೇರಿ ಜನರ ಸೇವೆ ಮಾಡುವಂತೆ ತಿಳಿಸಿದ್ದರು. ಹೀಗಾಗಿ ನಾನು ಈ ನಿರ್ಧಾರ ಕೈಗೊಂಡಿದ್ದೇನೆ’ ಎಂದೂ ಅವರು ತಿಳಿಸಿದ್ದರು.</p>.<p>‘ಜಾತಿ ಧರ್ಮಗಳನ್ನೂ ಮೀರಿ ಜನರಿಗೆ ಶಿಕ್ಷಣ ನೀಡುವ ಮೂಲಕ ಅವರನ್ನು ಮೇಲೆತ್ತಬೇಕು’ ಎಂದು ವಿದ್ಯಾರಾಣಿ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಸಮಾಜದ ಎಲ್ಲ ಸ್ತರದ ವಿದ್ಯಾರ್ಥಿಗಳಿಗೂ ತಾವು ಕೃಷ್ಣಗಿರಿಯಲ್ಲಿ ಟುಟೋರಿಯಲ್ ನಡೆಸುತ್ತಿರುವುದಾಗಿ ಹೇಳಿದ್ದಾರೆ.</p>.<p>‘ವಿದ್ಯಾರಾಣಿ ಅವರ ಸೇವೆಯನ್ನು ನಾವು ಸಮರ್ಪಕವಾಗಿ ಬಳಸಿಕೊಳ್ಳಲಿದ್ದೇವೆ. ಪಕ್ಷದಲ್ಲಿ ಆಕೆಯ ಸ್ಥಾನಮಾನವನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು’ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಕೆ.ಎಸ್ ನರೇಂದ್ರನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೃಷ್ಣಗಿರಿ (ತಮಿಳುನಾಡು): </strong>ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಲವು ದಶಕಗಳಕಾಲ ಭೀತಿ ಹುಟ್ಟಿಸಿದ್ದ ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯಾ ರಾಣಿ ಕೃಷ್ಣಗಿರಿ ಜಿಲ್ಲೆಯಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಸೇರಿದ್ದಾರೆ.</p>.<p>ಇವರೊಂದಿಗೆ ಪಾಟ್ರಾಳಿ ಮಕ್ಕಳ್ ಕಚ್ಚಿಯ 1000ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರಳಿಧರ ರಾವ್ ನೇತೃತ್ವದಲ್ಲಿ ಪಕ್ಷ ಸೇರಿದರು.</p>.<p>‘ವೃತ್ತಿಯಿಂದ ವಕೀಲೆಯಾಗಿರುವ, ಸಾಮಾಜಿಕ ಹೋರಾಟಗಾರ್ತಿಯೂ ಆಗಿರುವ ವಿದ್ಯಾರಾಣಿ ತಮ್ಮ ನಿರ್ಧಾರದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ‘ಮೋದಿ ಅವರ ಕಾರ್ಯ ಶೈಲಿಗೆ ನಾನು ಮನಸೋತಿದ್ದೇನೆ. ಅವರ ಸ್ಫೂರ್ತಿಯಿಂದಲೇ ನಾನು ಬಿಜೆಪಿ ಸೇರಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ.</p>.<p>‘ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರನ್ನು ಎರಡು ವರ್ಗಳ ಹಿಂದೆ ಭೇಟಿ ಮಾಡಿದ್ದೆ. ಆಗ ಅವರು ನನ್ನನ್ನು ಬಿಜೆಪಿ ಸೇರಿ ಜನರ ಸೇವೆ ಮಾಡುವಂತೆ ತಿಳಿಸಿದ್ದರು. ಹೀಗಾಗಿ ನಾನು ಈ ನಿರ್ಧಾರ ಕೈಗೊಂಡಿದ್ದೇನೆ’ ಎಂದೂ ಅವರು ತಿಳಿಸಿದ್ದರು.</p>.<p>‘ಜಾತಿ ಧರ್ಮಗಳನ್ನೂ ಮೀರಿ ಜನರಿಗೆ ಶಿಕ್ಷಣ ನೀಡುವ ಮೂಲಕ ಅವರನ್ನು ಮೇಲೆತ್ತಬೇಕು’ ಎಂದು ವಿದ್ಯಾರಾಣಿ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಸಮಾಜದ ಎಲ್ಲ ಸ್ತರದ ವಿದ್ಯಾರ್ಥಿಗಳಿಗೂ ತಾವು ಕೃಷ್ಣಗಿರಿಯಲ್ಲಿ ಟುಟೋರಿಯಲ್ ನಡೆಸುತ್ತಿರುವುದಾಗಿ ಹೇಳಿದ್ದಾರೆ.</p>.<p>‘ವಿದ್ಯಾರಾಣಿ ಅವರ ಸೇವೆಯನ್ನು ನಾವು ಸಮರ್ಪಕವಾಗಿ ಬಳಸಿಕೊಳ್ಳಲಿದ್ದೇವೆ. ಪಕ್ಷದಲ್ಲಿ ಆಕೆಯ ಸ್ಥಾನಮಾನವನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು’ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ಕೆ.ಎಸ್ ನರೇಂದ್ರನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>