ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಡಿಫೆನ್ಸ್ ಎಕ್ಸ್ಪೋ 2018ಕ್ಕೆ ಚಾಲನೆ ನೀಡಲು ಗುರುವಾರ ಚೆನ್ನೈಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಪ್ಪು ಬಾವುಟ, ಕಪ್ಪು ಬಲೂನ್ ಪ್ರದರ್ಶಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ, ಚೆನ್ನೈನಲ್ಲಿ ಆಡಬೇಕಿದ್ದ ಐಪಿಎಲ್ ಪಂದ್ಯಗಳನ್ನು ಪುಣೆಗೆ ಸ್ಥಳಾಂತರ ಮಾಡಲು ಬಿಸಿಸಿಐ ನಿರ್ಧರಿಸಿದೆ.