ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸೇನೆಯನ್ನು ‘ಮೋದಿ ಅವರ ಸೇನೆ’ ಎಂದು ಕರೆದಿದ್ದರು. ಬಾಲಾಕೋಟ್ ವಾಯುದಾಳಿಯ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ ಕೇಳಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಈ ವಿಚಾರಗಳನ್ನು ಪದೇ ಪದೇ ಪ್ರಸ್ತಾಪಿಸಿದ್ದಾರೆ. ಇದರಿಂದ ಸೇನೆಗೆ ಧಕ್ಕೆಯಾಗುತ್ತದೆ. ಹೀಗಾಗಿ ರಾಜಕೀಯ ಉದ್ದೇಶಕ್ಕೆ ಸೇನೆಯ ವಿಚಾರಗಳನ್ನು ಬಳಸಿಕೊಳ್ಳದಂತೆ ನಿರ್ದೇಶನ ನೀಡಿ ಎಂದು ಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿತ್ತು.