ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದ ಗುರುವಾರದಂದೇ ವಿವಿಧ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ 156 ಯೋಧರು ದೇಶದ ಎಲ್ಲ ಸಶಸ್ತ್ರ ಪಡೆಗಳ ಮಹಾ ದಂಡನಾಯಕರೂಆಗಿರುವರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಪತ್ರ ಬರೆದು, ‘ರಾಜಕೀಯ ಉದ್ದೇಶಗಳಿಗೆ’ ಸಶಸ್ತ್ರಪಡೆಗಳನ್ನು ಎಳೆದು ತರುವುದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.