ಬೆಂಗಳೂರು:ಕೆಫೆ ಕಾಫಿ ಡೇ ಹರಿಕಾರ ವಿ.ಜಿ.ಸಿದ್ಧಾರ್ಥ ಅವರ ವಿಷಯ ತಿಳಿಯುತ್ತಿದ್ದಂತೆ, ಅವರ ಆರ್ಥಿಕ ಬಿಕ್ಕಟ್ಟಿನಸ್ಥಿತಿಯನ್ನು ಉಲ್ಲೇಖಿಸಿಟ್ವೀಟ್ ಮಾಡಿರುವ ಮದ್ಯದ ದೊರೆ ವಿಜಯ್ ಮಲ್ಯ, ನಾವಿಬ್ಬರೂ ಒಂದೇ ದೋಣಿಯಲ್ಲಿನ ಪ್ರಯಾಣಿಕರುಎನ್ನುವ ಭಾವಾರ್ಥದ ಮಾತುಗಳನ್ನಾಡಿದ್ದಾರೆ.
ಸಿದ್ಧಾರ್ಥ ಪ್ರಕರಣವನ್ನೇ ಗುರಿಯಾಗಿಸಿಕೊಂಡು ಮಲ್ಯ ಅವರು, ಈ ದೇಶದಲ್ಲಿನ ಸರ್ಕಾರಿ ಸಂಸ್ಥೆಗಳು ಹಾಗೂ ಬ್ಯಾಂಕ್ಗಳ ಮೇಲೆ ಹರಿಹಾಯ್ದಿದ್ದಾರೆ.
‘ಸಿದ್ಧಾರ್ಥ ಅವರು ತಮ್ಮ ‘ಕೆಫೆ ಕಾಫಿ ಡೇ’ಯ ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಸಿಬ್ಬಂದಿಗೆ ಬರೆದ ಪತ್ರವನ್ನು ಓದಿ, ನಾನು ಬೇಸರಗೊಂಡಿದ್ದೇನೆ. ಈ ಬ್ಯಾಂಕ್ಗಳು, ಸರ್ಕಾರಿ ಸಂಸ್ಥೆಗಳು ಯಾರನ್ನೇ ಆದರೂ ಜಿಗುಪ್ಸೆಗೊಳಿಸುತ್ತದೆ. ನನ್ನ ವಿಷಯವನ್ನೇ ನೋಡಿ, ಸಾಲ ಮರುಪಾವತಿ ಮಾಡುತ್ತೇನೆ ಎಂದರೂ ಏನೆಲ್ಲ ಮಾಡುತ್ತಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ.
I am indirectly related to VG Siddhartha. Excellent human and brilliant entrepreneur. I am devastated with the contents of his letter. The Govt Agencies and Banks can drive anyone to despair. See what they are doing to me despite offer of full repayment. Vicious and unrelenting.
— Vijay Mallya (@TheVijayMallya) July 30, 2019
ಮತ್ತೊಂದು ಟ್ವೀಟ್ನಲ್ಲಿ ವಿದೇಶಗಳಲ್ಲಿ ಅಲ್ಲಿನ ಸರ್ಕಾರ ಮತ್ತು ಬ್ಯಾಂಕ್ಗಳು ಸಾಲಗಾರರು ಮಾಡಿದ ಸಾಲ ತೀರಿಸುವಲ್ಲಿ ಸಹಾಯ ಮಾಡುತ್ತವೆ. ಆದರೆ ನನ್ನ ವಿಚಾರದಲ್ಲಿ ಇದು ತದ್ವಿರುದ್ಧವಾಗಿದೆ. ನಾನು ಸಾಲ ತೀರಿಸಲು ಮಾಡಿದ ಪ್ರತಿ ಪ್ರಯತ್ನದಲ್ಲೂ ಸರ್ಕಾರ ಮತ್ತು ಬ್ಯಾಂಕ್ಗಳು ತಡೆಗೋಡೆಯಾಗಿವೆ ಎಂದು ಹೇಳಿದ್ದಾರೆ.
In Western Countries, Government and Banks help borrowers repay their debts. In my case they are obstructing every possible effort for me to repay my debt whilst competing for my assets. As far as the prima facie criminal case goes wait for the appeal granted.
— Vijay Mallya (@TheVijayMallya) July 30, 2019
ಮೂರು ದಶಕಗಳಿಂದ ಭಾರತದ ಬಹುದೊಡ್ಡ ಮದ್ಯ ಕಂಪನಿಯನ್ನು ನಿರ್ವಹಿಸಿ ರಾಜ್ಯದ ಖಜಾನೆಗೆ ಸಾವಿರಕೋಟಿಯಷ್ಟು ಹಣ ಸಂಭಾವನೆ ನೀಡಿದ್ದೇನೆ. ಕಿಂಗ್ ಫಿಷರ್ ವಿಮಾನ ಸಂಸ್ಥೆ ಕೂಡಾ ಸಾಕಷ್ಟು ಹಣವನ್ನು ಸಂಭಾವನೆ ನೀಡಿದೆ. ಉತ್ತಮವಾಗಿದ್ದ ವಿಮಾನ ಸಂಸ್ಥೆ ನಷ್ಟವಾಯಿತು ಎಂದು ಈ ಹಿಂದೆ ಮಲ್ಯ ಟ್ವೀಟ್ ಮಾಡಿದ್ದರು.
ವಿಮಾನ ಇಂಧನ ದರ ಏರಿಕೆಯಾಗಿರುವ ಕಾರಣ ವಿಮಾನ ಸಂಸ್ಥೆ ಆರ್ಥಿಕ ಮುಗ್ಗಟ್ಟು ಅನುಭವಿಸಿದೆ. ಕಚ್ಛಾ ತೈಲ ಬ್ಯಾರೆಲ್ಗೆ 140 ಡಾಲರ್ವರೆಗೆ ದರ ಏರಿಕೆ ಮಾಡಿದಾಗ, ಕಿಂಗ್ ಫಿಷರ್ಗೆ ಆರ್ಥಿಕ ಸಮಸ್ಯೆ ಕಂಡು ಬಂತು. ಸಾಲದ ಹೊರೆ ಹೆಚ್ಚಾಯಿತು. ಹಾಗಾಗಿ ಬ್ಯಾಂಕ್ ಸಾಲವೂ ಏರಿಕೆಯಾಗುತ್ತಾ ಬಂತು ಎಂದು ಟ್ವೀಟ್ನಲ್ಲಿ ವಿವರಿಸಿದ್ದರು.
Airlines struggling financially partly becoz of high ATF prices. Kingfisher was a fab airline that faced the highest ever crude prices of $ 140/barrel. Losses mounted and that’s where Banks money went.I have offered to repay 100 % of the Principal amount to them. Please take it.
— Vijay Mallya (@TheVijayMallya) December 5, 2018
ನಾನು ಸಾಲ ಪಡೆದಿರುವ ಮೊತ್ತವನ್ನು ಮರು ಪಾವತಿಸಲು ನಾನು ಸಿದ್ಧನಿದ್ದೇನೆ. ಬ್ಯಾಂಕ್ ಮತ್ತು ಸರ್ಕಾರ ಅದನ್ನು ದಯಮಾಡಿ ಸ್ವೀಕರಿಸಬೇಕು ಎಂದು ನಾನು ವಿನಂತಿಸುತ್ತೇನೆ. ಅದನ್ನು ಸ್ವೀಕರಿಸಲು ಸಿದ್ಧವಿಲ್ಲದಿದ್ದರೆ ಕಾರಣವೇನು?. ಬ್ಯಾಂಕ್ಗೆ ಸಾಲ ಮರುಪಾವತಿ ಮಾಡದೆ ಪರಾರಿಯಾದವ ಎಂದು ರಾಜಕಾರಣಿಗಳೂ, ಮಾಧ್ಯಮದವರೂ ಬಿಂಬಿಸುತ್ತಿದ್ದಾರೆ. ಇದೆಲ್ಲವೂ ಸುಳ್ಳು. ನಾನು ಹಣ ಪಾವತಿ ಮಾಡುತ್ತೇನೆ ಎಂದು ಕರ್ನಾಟಕ ಹೈಕೋರ್ಟ್ನಲ್ಲಿ ಹೇಳಿದ್ದೆ, ಅದು ಯಾಕೆ ಯಾರಿಗೂ ಕೇಳಿಸುವುದಿಲ್ಲ? ಎಂದು ಟ್ವೀಟ್ನಲ್ಲಿ ಬೇಸರ ವ್ಯಕ್ತಪಡಿಸಿದ್ದರು.
Politicians and Media are constantly talking loudly about my being a defaulter who has run away with PSU Bank money. All this is false. Why don’t I get fair treatment and the same loud noise about my comprehensive settlement offer before the Karnataka High Court. Sad.
— Vijay Mallya (@TheVijayMallya) December 5, 2018
ಸಾಲ ಮರುಪಾವತಿ ಮಾಡದೇ ಇರುವ ಮಲ್ಯ ವಿರುದ್ಧ 2016ರಲ್ಲಿ ಬ್ಯಾಂಕ್ಗಳು ಕ್ರಮ ತೆಗೆದುಕೊಳ್ಳಲು ಮುಂದಾದ ವೇಳೆ ಮಲ್ಯ ದೇಶ ಬಿಟ್ಟು ಪರಾರಿಯಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.