ಅಕ್ಟೋಬರ್ 25ರಂದು ಸಿಬಿಐ ನ್ಯಾಯಾಲಯಕ್ಕೆ ಹಾಜರಾಗಲು ಹೈದರಾಬಾದ್ಗೆ ತೆರಳುತ್ತಿದ್ದ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಸೆಲ್ಫಿ ತೆಗೆಸಿಕೊಳ್ಳುವ ನೆಪದಲ್ಲಿ ವಿಶಾಖಪಟ್ಟಣ ವಿಮಾನ ನಿಲ್ದಾಣದಲ್ಲಿದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದಿದ್ದ. ಅವರ ಎಡಭುಜಕ್ಕೆ ಗಾಯವಾಗಿದ್ದ ಕಾರಣ ಪಾದಯಾತ್ರೆಯನ್ನು ನಿಲ್ಲಿಸಿ, ಮೂರು ವಾರಗಳ ಕಾಲ ವಿಶ್ರಾಂತಿ ಪಡೆದಿದ್ದರು.