ನವದೆಹಲಿ:ವಿವಿಧ ಸ್ಥಳಗಳಲ್ಲಿ ಲಾಕ್ಡೌನ್ ಉಲ್ಲಂಘನೆಯಾಗುತ್ತಿರುವುದು ಕಂಡುಬಂದಿದ್ದು, ಲಾಕ್ಡೌನ್ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕೆಂದು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳಿಗೆ ಗುರುವಾರ ಸೂಚನೆ ನೀಡಿದೆ.
ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರುಎಲ್ಲಾ ರಾಜ್ಯ ಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳ ಜತೆ ಸಂವಹನ ನಡೆಸಿದರು.
‘ರಾತ್ರಿ ಕರ್ಫ್ಯೂ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಸಂಜೆ 7ರಿಂದ ಬೆಳಿಗ್ಗೆ 7ವರೆಗೆ ಅವಶ್ಯಕವಲ್ಲದ ಎಲ್ಲಾ ಚಟುವಟಿಕೆಗಳನ್ನು ನಿರ್ಬಂಧಿಸಬೇಕು’ ಎಂದು ಅವರು ಹೇಳಿದ್ದಾರೆ.