<p><strong>ಜೈಪುರ್ :</strong> ರಾಜಸ್ಥಾನದ ನಾಗೌರ್ ಜಿಲ್ಲೆಯ ದ್ವಿಚಕ್ರ ವಾಹನ ಶೋರೂಮ್ನಲ್ಲಿ ಹಣ ಕಳ್ಳತನ ಮಾಡುವಾಗ ಸಿಕ್ಕಿಬಿದ್ದಿದ್ದಾರೆ ಎಂದು ಆರೋಪಿಸಿ ಇಬ್ಬರು ದಲಿತರ ಮೇಲೆ ಶೋರೂಮ್ ಸಿಬ್ಬಂದಿಗಳು ಥಳಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.</p>.<p>ಘಟನೆಗೆ ಸಂಬಂಧಿಸಿದಂತೆ ಪೊಲೀಸರು 5 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.</p>.<p><strong>ಏನಿದು ಘಟನೆ?</strong><br />ಇಬ್ಬರು ವ್ಯಕ್ತಿಗಳು ಭಾನುವಾರ ಶೋರೂಮ್ ನಿಂದ ಹಣ ಕದಿಯುತ್ತಿದ್ದಾಗ ಸಿಕ್ಕಿಹಾಕಿಕೊಂಡಿದ್ದರು. ಅವರ ಮೇಲೆಶೋರೂಮ್ ಸಿಬ್ಬಂದಿಗಳು ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಆ ವೇಳೆ ಚಿತ್ರೀಕರಿಸಿದ ವಿಡಿಯೊ ವೈರಲ್ ಆಗಿದೆ. ವಿಡಿಯೊ ಮೂಲಕ ಘಟನೆ ಬೆಳಕಿಗೆ ಬಂದಿದ್ದುಸಂತ್ರಸ್ತರು ಬುಧವಾರ ಎಫ್ಐಆರ್ ದಾಖಲಿಸಿದ್ದಾರೆ ಎಂದು ಪಂಚೋಡಿ ಪೊಲೀಸ್ ಠಾಣೆಯ ವರಿಷ್ಠಾಧಿಕಾರಿ ರಾಜ್ಪಾಲ್ ಸಿಂಗ್ ಹೇಳಿದ್ದಾರೆ. </p>.<p>ಹಣ ಕದ್ದ ಆರೋಪದಲ್ಲಿ ಇಬ್ಬರು ದಲಿತರ ವಿರುದ್ಧ ಶೋರೂಮ್ ಸಿಬ್ಬಂದಿಗಳು ದೂರು ನೀಡಿದ್ದಾರೆ.<br />ದಲಿತರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಐದು ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<p><strong>ರಾಹುಲ್ ಖಂಡನೆ:</strong></p>.<p>ರಾಜಸ್ಥಾನದ ನಾಗೌರ್ನಲ್ಲಿ ಇಬ್ಬರು ದಲಿತ ಯುವಕರ ಮೇಲೆ ಅಮಾನವೀಯ ಹಲ್ಲೆ ನಡೆಸುತ್ತಿರುವ ವಿಡಿಯೊ ಭಯಾನಕವಾಗಿದೆ. ಈ ಅಪರಾಧವೆಸಗಿದವರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುವ ಮೂಲಕ ನ್ಯಾಯ ಒದಗಿಸಬೇಕು ಎಂದು ನಾನು ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟ್ವೀಟಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ್ :</strong> ರಾಜಸ್ಥಾನದ ನಾಗೌರ್ ಜಿಲ್ಲೆಯ ದ್ವಿಚಕ್ರ ವಾಹನ ಶೋರೂಮ್ನಲ್ಲಿ ಹಣ ಕಳ್ಳತನ ಮಾಡುವಾಗ ಸಿಕ್ಕಿಬಿದ್ದಿದ್ದಾರೆ ಎಂದು ಆರೋಪಿಸಿ ಇಬ್ಬರು ದಲಿತರ ಮೇಲೆ ಶೋರೂಮ್ ಸಿಬ್ಬಂದಿಗಳು ಥಳಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.</p>.<p>ಘಟನೆಗೆ ಸಂಬಂಧಿಸಿದಂತೆ ಪೊಲೀಸರು 5 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.</p>.<p><strong>ಏನಿದು ಘಟನೆ?</strong><br />ಇಬ್ಬರು ವ್ಯಕ್ತಿಗಳು ಭಾನುವಾರ ಶೋರೂಮ್ ನಿಂದ ಹಣ ಕದಿಯುತ್ತಿದ್ದಾಗ ಸಿಕ್ಕಿಹಾಕಿಕೊಂಡಿದ್ದರು. ಅವರ ಮೇಲೆಶೋರೂಮ್ ಸಿಬ್ಬಂದಿಗಳು ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಆ ವೇಳೆ ಚಿತ್ರೀಕರಿಸಿದ ವಿಡಿಯೊ ವೈರಲ್ ಆಗಿದೆ. ವಿಡಿಯೊ ಮೂಲಕ ಘಟನೆ ಬೆಳಕಿಗೆ ಬಂದಿದ್ದುಸಂತ್ರಸ್ತರು ಬುಧವಾರ ಎಫ್ಐಆರ್ ದಾಖಲಿಸಿದ್ದಾರೆ ಎಂದು ಪಂಚೋಡಿ ಪೊಲೀಸ್ ಠಾಣೆಯ ವರಿಷ್ಠಾಧಿಕಾರಿ ರಾಜ್ಪಾಲ್ ಸಿಂಗ್ ಹೇಳಿದ್ದಾರೆ. </p>.<p>ಹಣ ಕದ್ದ ಆರೋಪದಲ್ಲಿ ಇಬ್ಬರು ದಲಿತರ ವಿರುದ್ಧ ಶೋರೂಮ್ ಸಿಬ್ಬಂದಿಗಳು ದೂರು ನೀಡಿದ್ದಾರೆ.<br />ದಲಿತರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಐದು ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<p><strong>ರಾಹುಲ್ ಖಂಡನೆ:</strong></p>.<p>ರಾಜಸ್ಥಾನದ ನಾಗೌರ್ನಲ್ಲಿ ಇಬ್ಬರು ದಲಿತ ಯುವಕರ ಮೇಲೆ ಅಮಾನವೀಯ ಹಲ್ಲೆ ನಡೆಸುತ್ತಿರುವ ವಿಡಿಯೊ ಭಯಾನಕವಾಗಿದೆ. ಈ ಅಪರಾಧವೆಸಗಿದವರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುವ ಮೂಲಕ ನ್ಯಾಯ ಒದಗಿಸಬೇಕು ಎಂದು ನಾನು ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟ್ವೀಟಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>