<p>ಶ್ರೀನಗರ (ಪಿಟಿಐ): ಕೇಂದ್ರಿಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಮೇಲೆ ಪುಲ್ವಾಮಾದಲ್ಲಿ ನಡೆಸಿದ ಆತ್ಮಾಹುತಿ ದಾಳಿ ನಡೆಸಿದ ಜೆಇಎಂ ದಾಳಿಕೋರ ‘ವರ್ಚುವಲ್ ಸಿಮ್’ ಬಳಸಿದ್ದು ದೃಢಪಟ್ಟಿದ್ದು, ಈ ಬಗ್ಗೆ ವಿಸ್ತೃತ ಮಾಹಿತಿ ನೀಡುವಂತೆ ಅಮೆರಿಕಕ್ಕೆ ಭಾರತ ಮನವಿ ಸಲ್ಲಿಸಿದೆ.</p>.<p>ಭಯೋತ್ಪಾದನ ದಾಳಿ ನಡೆದ ಸ್ಥಳ ಹಾಗೂ ತ್ರಾಲ್ನಲ್ಲಿ ನಡೆದ ಎನ್ಕೌಂಟರ್ ನಡೆಸಿದ ಸ್ಥಳದಲ್ಲಿ ಜಮ್ಮು ಕಾಶ್ಮೀರ ಪೊಲೀಸರು, ರಾಷ್ಟ್ರೀಯ ತನಿಖಾದಳ (ಎನ್ಐಎ) ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಸಿಆರ್ಪಿಎಫ್ ಮೇಲೆ ದಾಳಿ ನಡೆಸಿದ್ದ ಆತ್ಮಾಹುತಿ ದಾಳಿಕೋರ ಅದಿಲ್ ದರ್, ವರ್ಚುವಲ್ ಸಿಮ್ ಬಳಸಿ ಗಡಿಭಾಗದಲ್ಲಿರುವ ಜೆಇಎಂ ಮುಖಂಡರ ಜತೆ ಸಂಪರ್ಕದಲ್ಲಿ ಇದ್ದಿದ್ದು ಖಚಿತಪಟ್ಟಿತ್ತು.</p>.<p>ಆತ್ಮಾಹುತಿ ದಾಳಿಯ ಪ್ರಮುಖ ಪಾತ್ರ ವಹಿಸಿದ್ದಮುದಾಸ್ಸೀರ್ ಖಾನ್ ತ್ರಾಲ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಹತ್ಯೆಯಾಗಿದ್ದ. ಭಯೋತ್ಪಾದಕರು ತಮ್ಮ ಕುಕೃತ್ಯ ನಡೆಸಲು ವರ್ಚುವಲ್ ಸಿಮ್ ಬಳಸಿ ಯಶಸ್ವಿಯಾಗಿದ್ದನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದರು.</p>.<p>ಫೆ.14ರಂದು ಸಿಆರ್ಪಿಎಫ್ ಯೋಧರು ಸಾಗುತ್ತಿದ್ದ ವಾಹನದ ಮೇಲೆ ನಡೆದ ಆತ್ಮಾಹುತಿ ದಾಳಿಯಿಂದ 40 ಯೋಧರು ಹುತಾತ್ಮರಾಗಿದ್ದರು.</p>.<p><strong>ಸಿಮ್ ಬಳಕೆ ಹೇಗೆ ?</strong></p>.<p>ವರ್ಚುವಲ್ ಸಿಮ್ ಸೇವೆಯನ್ನು ಅಮೆರಿಕ ಒದಗಿಸುತ್ತದೆ. ಈ ತಂತ್ರಜ್ಞಾನದಲ್ಲಿ ಬಳಕೆದಾರರಿಗೆ ಬೇಕಾದ ದೂರವಾಣಿ ಸಂಖ್ಯೆಯನ್ನು ಕಂಪ್ಯೂಟರ್ ಸೃಷ್ಟಿಸುತ್ತದೆ. ಬಳಿಕ ಸ್ಮಾರ್ಟ್ಫೋನ್ನಲ್ಲಿ ಇದರ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಬೇಕು.</p>.<p>ಈ ದೂರವಾಣಿ ಸಂಖ್ಯೆಯನ್ನು ಸಾಮಾಜಿಕ ಜಾಲತಾಣಗಳಾದ ವಾಟ್ಸ್ಆ್ಯಪ್, ಫೇಸ್ಬುಕ್, ಟೆಲಿಗ್ರಾಂ ಹಾಗೂ ಟ್ವಿಟರ್ ಜೊತೆ ಸಂಪರ್ಕ ಕಲ್ಪಿಸಬೇಕು. ಯಾವುದಾದರೂ ಜಾಲತಾಣಕ್ಕೆ ಸಂಪರ್ಕ ಹೊಂದಿದ ಬಳಿಕ ಪ್ರಮಾಣೀಕರಣ ಸಂಖ್ಯೆ ನಮೂದಾಗುತ್ತದೆ. ಇದಾದ ನಂತರ ಸ್ಮಾರ್ಟ್ಫೋನ್ನಲ್ಲಿ ತಮಗೆ ಬೇಕಾದ ವ್ಯಕ್ತಿಗಳ ಜತೆ ಸಂಭಾಷಣೆ ನಡೆಸಬಹುದು.</p>.<p>ಉಗ್ರರಿಂದಲೂ ವರ್ಚುವಲ್ ಸಿಮ್ ಬಳಕೆ: ಪುಲ್ವಾಮಾ ದಾಳಿ ನಡೆಸಿದ ಅದಿಲ್ ದರ್ ಹಾಗೂ ದಾಳಿಯ ಪ್ರಮುಖ ಸೂತ್ರಧಾರ ಮುದಾಸ್ಸೀರ್ ಖಾನ್ ಕೂಡ ಇದೇ ತಂತ್ರಜ್ಞಾನ ಬಳಸಿ ನಿರಂತರ ಸಂಭಾಷಣೆ ನಡೆಸಿದ್ದರು.</p>.<p>ಮಾಹಿತಿ ಕೋರಿಕೆ: ದಾಳಿಗೆ ಸಂಚು ರೂಪಿಸಲು ಉಗ್ರರು ಬಳಸಿದ ‘ವರ್ಚುವಲ್ ಸಿಮ್’ ಅನ್ನು ಕ್ರಿಯಾಶೀಲಗೊಳಿಸಿದವರು ಯಾರು ? ಇಂಟರ್ನೆಟ್ ಪ್ರೊಟೊಕಾಲ್ ಮಾಹಿತಿ ನೀಡಿ ಎಂದು ಭಾರತ ಸರ್ಕಾರ, ಅಮೆರಿಕವನ್ನು ಕೋರಿದೆ.</p>.<p><strong>ಉಗ್ರರಿಗೆ ನೆರವು:₹7 ಕೋಟಿ ಮೌಲ್ಯದ ಆಸ್ತಿ ಪತ್ತೆ</strong></p>.<p><strong>ನವದೆಹಲಿ:</strong> ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಚಟುವಟಿಕೆಗಳಿಗೆ ಹಣಕಾಸಿನ ನೆರವು ನೀಡುತ್ತಿದ್ದವರ ₹7 ಕೋಟಿ ಮೌಲ್ಯದ ಆಸ್ತಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.</p>.<p>ಈ ಆಸ್ತಿಯ ವರಮಾನವನ್ನು ಬಳಸಿಕೊಂಡು ಉಗ್ರರಿಗೆ ನೆರವು ನೀಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಲಷ್ಕರ್ ಎ ತಯಬಾ ಮುಖ್ಯಸ್ಥ ಹಫೀಜ್ ಸಯೀದ್ ಮತ್ತು ಹಿಜ್ಬುಲ್ ಮುಜಾಹಿದೀನ್ ಸ್ಥಾಪಕ ಸಯ್ಯದ್ ಸಲಾಹುದ್ದೀನ್ ಸೇರಿದಂತೆ 13 ಮಂದಿಯನ್ನು ಕಾಶ್ಮೀರದಲ್ಲಿ ಉಗ್ರರಿಗೆ ಹಣಕಾಸಿನ ನೆರವು ನೀಡುತ್ತಿರುವವರು ಎಂದು ಎನ್ಐಎ ಗುರುತಿಸಿದೆ.</p>.<p>ಉಗ್ರರಿಗೆ ಹಣಕಾಸಿನ ನೆರವು ನೀಡುತ್ತಿರುವವರ ವಿರುದ್ಧ ನಡೆದ ಕಾರ್ಯಾಚರಣೆಯ ಅಂಗವಾಗಿ ತನಿಖಾಧಿಕಾರಿಗಳು ಇವರ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ.</p>.<p>ಪ್ರತ್ಯೇಕತಾವಾದಿ ನಾಯಕರಾದ ಅಫ್ತಾಬ್ ಅಹಮ್ಮದ್ ಶಾ, ಅಲ್ತಾಫ್ ಅಹಮ್ಮದ್ ಶಾ, ಮೊಹಮ್ಮದ್ ನಯೀಮ್ ಖಾನ್, ಫಾರುಖ್ ಅಹಮ್ಮದ್ ದಾರ್, ಉದ್ಯಮಿ ಜಾಹೂರ್ ಅಹಮ್ಮದ್ ಶಾ ವತಾಲಿ ಮತ್ತು ಮೊಹಮ್ಮದ್ ಅಕ್ಬರ್ ಖಾಂಡೆ ಪಟ್ಟಿಯಲ್ಲಿರುವ ಇತರರು.</p>.<p>ಇವರು ಪ್ರಮುಖ ಉಗ್ರ ಸಂಘಟನೆಗಳಿಗೆ, ಪ್ರತ್ಯೇಕತಾವಾದಿಗಳಿಗೆ ಹಾಗೂ ಕಲ್ಲು ತೂರಾಟ ನಡೆಸುವವರಿಗೆ ಹಣಕಾಸಿನ ನೆರವು ಒದಗಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಜಾಹೂರ್ ಅಹಮ್ಮದ್ ಶಾನನ್ನು ಈ ಹಿಂದೆಯೇ ಎನ್ಐಎ ಬಂಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಗರ (ಪಿಟಿಐ): ಕೇಂದ್ರಿಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಮೇಲೆ ಪುಲ್ವಾಮಾದಲ್ಲಿ ನಡೆಸಿದ ಆತ್ಮಾಹುತಿ ದಾಳಿ ನಡೆಸಿದ ಜೆಇಎಂ ದಾಳಿಕೋರ ‘ವರ್ಚುವಲ್ ಸಿಮ್’ ಬಳಸಿದ್ದು ದೃಢಪಟ್ಟಿದ್ದು, ಈ ಬಗ್ಗೆ ವಿಸ್ತೃತ ಮಾಹಿತಿ ನೀಡುವಂತೆ ಅಮೆರಿಕಕ್ಕೆ ಭಾರತ ಮನವಿ ಸಲ್ಲಿಸಿದೆ.</p>.<p>ಭಯೋತ್ಪಾದನ ದಾಳಿ ನಡೆದ ಸ್ಥಳ ಹಾಗೂ ತ್ರಾಲ್ನಲ್ಲಿ ನಡೆದ ಎನ್ಕೌಂಟರ್ ನಡೆಸಿದ ಸ್ಥಳದಲ್ಲಿ ಜಮ್ಮು ಕಾಶ್ಮೀರ ಪೊಲೀಸರು, ರಾಷ್ಟ್ರೀಯ ತನಿಖಾದಳ (ಎನ್ಐಎ) ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಸಿಆರ್ಪಿಎಫ್ ಮೇಲೆ ದಾಳಿ ನಡೆಸಿದ್ದ ಆತ್ಮಾಹುತಿ ದಾಳಿಕೋರ ಅದಿಲ್ ದರ್, ವರ್ಚುವಲ್ ಸಿಮ್ ಬಳಸಿ ಗಡಿಭಾಗದಲ್ಲಿರುವ ಜೆಇಎಂ ಮುಖಂಡರ ಜತೆ ಸಂಪರ್ಕದಲ್ಲಿ ಇದ್ದಿದ್ದು ಖಚಿತಪಟ್ಟಿತ್ತು.</p>.<p>ಆತ್ಮಾಹುತಿ ದಾಳಿಯ ಪ್ರಮುಖ ಪಾತ್ರ ವಹಿಸಿದ್ದಮುದಾಸ್ಸೀರ್ ಖಾನ್ ತ್ರಾಲ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಹತ್ಯೆಯಾಗಿದ್ದ. ಭಯೋತ್ಪಾದಕರು ತಮ್ಮ ಕುಕೃತ್ಯ ನಡೆಸಲು ವರ್ಚುವಲ್ ಸಿಮ್ ಬಳಸಿ ಯಶಸ್ವಿಯಾಗಿದ್ದನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದರು.</p>.<p>ಫೆ.14ರಂದು ಸಿಆರ್ಪಿಎಫ್ ಯೋಧರು ಸಾಗುತ್ತಿದ್ದ ವಾಹನದ ಮೇಲೆ ನಡೆದ ಆತ್ಮಾಹುತಿ ದಾಳಿಯಿಂದ 40 ಯೋಧರು ಹುತಾತ್ಮರಾಗಿದ್ದರು.</p>.<p><strong>ಸಿಮ್ ಬಳಕೆ ಹೇಗೆ ?</strong></p>.<p>ವರ್ಚುವಲ್ ಸಿಮ್ ಸೇವೆಯನ್ನು ಅಮೆರಿಕ ಒದಗಿಸುತ್ತದೆ. ಈ ತಂತ್ರಜ್ಞಾನದಲ್ಲಿ ಬಳಕೆದಾರರಿಗೆ ಬೇಕಾದ ದೂರವಾಣಿ ಸಂಖ್ಯೆಯನ್ನು ಕಂಪ್ಯೂಟರ್ ಸೃಷ್ಟಿಸುತ್ತದೆ. ಬಳಿಕ ಸ್ಮಾರ್ಟ್ಫೋನ್ನಲ್ಲಿ ಇದರ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಬೇಕು.</p>.<p>ಈ ದೂರವಾಣಿ ಸಂಖ್ಯೆಯನ್ನು ಸಾಮಾಜಿಕ ಜಾಲತಾಣಗಳಾದ ವಾಟ್ಸ್ಆ್ಯಪ್, ಫೇಸ್ಬುಕ್, ಟೆಲಿಗ್ರಾಂ ಹಾಗೂ ಟ್ವಿಟರ್ ಜೊತೆ ಸಂಪರ್ಕ ಕಲ್ಪಿಸಬೇಕು. ಯಾವುದಾದರೂ ಜಾಲತಾಣಕ್ಕೆ ಸಂಪರ್ಕ ಹೊಂದಿದ ಬಳಿಕ ಪ್ರಮಾಣೀಕರಣ ಸಂಖ್ಯೆ ನಮೂದಾಗುತ್ತದೆ. ಇದಾದ ನಂತರ ಸ್ಮಾರ್ಟ್ಫೋನ್ನಲ್ಲಿ ತಮಗೆ ಬೇಕಾದ ವ್ಯಕ್ತಿಗಳ ಜತೆ ಸಂಭಾಷಣೆ ನಡೆಸಬಹುದು.</p>.<p>ಉಗ್ರರಿಂದಲೂ ವರ್ಚುವಲ್ ಸಿಮ್ ಬಳಕೆ: ಪುಲ್ವಾಮಾ ದಾಳಿ ನಡೆಸಿದ ಅದಿಲ್ ದರ್ ಹಾಗೂ ದಾಳಿಯ ಪ್ರಮುಖ ಸೂತ್ರಧಾರ ಮುದಾಸ್ಸೀರ್ ಖಾನ್ ಕೂಡ ಇದೇ ತಂತ್ರಜ್ಞಾನ ಬಳಸಿ ನಿರಂತರ ಸಂಭಾಷಣೆ ನಡೆಸಿದ್ದರು.</p>.<p>ಮಾಹಿತಿ ಕೋರಿಕೆ: ದಾಳಿಗೆ ಸಂಚು ರೂಪಿಸಲು ಉಗ್ರರು ಬಳಸಿದ ‘ವರ್ಚುವಲ್ ಸಿಮ್’ ಅನ್ನು ಕ್ರಿಯಾಶೀಲಗೊಳಿಸಿದವರು ಯಾರು ? ಇಂಟರ್ನೆಟ್ ಪ್ರೊಟೊಕಾಲ್ ಮಾಹಿತಿ ನೀಡಿ ಎಂದು ಭಾರತ ಸರ್ಕಾರ, ಅಮೆರಿಕವನ್ನು ಕೋರಿದೆ.</p>.<p><strong>ಉಗ್ರರಿಗೆ ನೆರವು:₹7 ಕೋಟಿ ಮೌಲ್ಯದ ಆಸ್ತಿ ಪತ್ತೆ</strong></p>.<p><strong>ನವದೆಹಲಿ:</strong> ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಚಟುವಟಿಕೆಗಳಿಗೆ ಹಣಕಾಸಿನ ನೆರವು ನೀಡುತ್ತಿದ್ದವರ ₹7 ಕೋಟಿ ಮೌಲ್ಯದ ಆಸ್ತಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.</p>.<p>ಈ ಆಸ್ತಿಯ ವರಮಾನವನ್ನು ಬಳಸಿಕೊಂಡು ಉಗ್ರರಿಗೆ ನೆರವು ನೀಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಲಷ್ಕರ್ ಎ ತಯಬಾ ಮುಖ್ಯಸ್ಥ ಹಫೀಜ್ ಸಯೀದ್ ಮತ್ತು ಹಿಜ್ಬುಲ್ ಮುಜಾಹಿದೀನ್ ಸ್ಥಾಪಕ ಸಯ್ಯದ್ ಸಲಾಹುದ್ದೀನ್ ಸೇರಿದಂತೆ 13 ಮಂದಿಯನ್ನು ಕಾಶ್ಮೀರದಲ್ಲಿ ಉಗ್ರರಿಗೆ ಹಣಕಾಸಿನ ನೆರವು ನೀಡುತ್ತಿರುವವರು ಎಂದು ಎನ್ಐಎ ಗುರುತಿಸಿದೆ.</p>.<p>ಉಗ್ರರಿಗೆ ಹಣಕಾಸಿನ ನೆರವು ನೀಡುತ್ತಿರುವವರ ವಿರುದ್ಧ ನಡೆದ ಕಾರ್ಯಾಚರಣೆಯ ಅಂಗವಾಗಿ ತನಿಖಾಧಿಕಾರಿಗಳು ಇವರ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ.</p>.<p>ಪ್ರತ್ಯೇಕತಾವಾದಿ ನಾಯಕರಾದ ಅಫ್ತಾಬ್ ಅಹಮ್ಮದ್ ಶಾ, ಅಲ್ತಾಫ್ ಅಹಮ್ಮದ್ ಶಾ, ಮೊಹಮ್ಮದ್ ನಯೀಮ್ ಖಾನ್, ಫಾರುಖ್ ಅಹಮ್ಮದ್ ದಾರ್, ಉದ್ಯಮಿ ಜಾಹೂರ್ ಅಹಮ್ಮದ್ ಶಾ ವತಾಲಿ ಮತ್ತು ಮೊಹಮ್ಮದ್ ಅಕ್ಬರ್ ಖಾಂಡೆ ಪಟ್ಟಿಯಲ್ಲಿರುವ ಇತರರು.</p>.<p>ಇವರು ಪ್ರಮುಖ ಉಗ್ರ ಸಂಘಟನೆಗಳಿಗೆ, ಪ್ರತ್ಯೇಕತಾವಾದಿಗಳಿಗೆ ಹಾಗೂ ಕಲ್ಲು ತೂರಾಟ ನಡೆಸುವವರಿಗೆ ಹಣಕಾಸಿನ ನೆರವು ಒದಗಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಜಾಹೂರ್ ಅಹಮ್ಮದ್ ಶಾನನ್ನು ಈ ಹಿಂದೆಯೇ ಎನ್ಐಎ ಬಂಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>