‘ಮೊದಲ ಮೂರು ಹಂತಗಳ ಚುನಾವಣೆ ಮುಗಿಯುತ್ತಿದ್ದಂತೆ ಬಿಜೆಪಿಯವರು ತಮ್ಮ ಹಿಂದುತ್ವದ ಅಜೆಂಡಾವನ್ನು ಮುನ್ನೆಲೆಗೆ ತಂದಿದ್ದಾರೆ. ಜಮ್ಮು ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡುವ ‘35ಎ’ ವಿಧಿ ಹಾಗೂ ಸೆಕ್ಷನ್ 370 ರದ್ದು ಮಾಡುವುದು, ವಿವಾದಿತ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣ, ಸಮಾನ ನಾಗರಿಕ ಸಂಹಿತೆ, ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ವಿಚಾರಗಳನ್ನು ಈಗ ಮುನ್ನೆಲೆಗೆ ತರಲಾಗಿದೆ. ಹಿಂದುತ್ವದ ಹೆಸರಿನಲ್ಲಿ ಜನರ ಭಾವನೆಯನ್ನು ಕೆರಳಿಸುವ ಸಲುವಾಗಿಯೇ ಪ್ರಜ್ಞಾ ಅವರನ್ನು ಭೋಪಾಲ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ’ ಎಂದು ಆರೋಪಿಸಿದರು.