ಬದ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಅಭ್ಯರ್ಥಿ ಅಜೇಶ್ ಯಾದವ್ ಪರನಡೆದ ರೋಡ್ಶೋವನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ‘ಆರೋಗ್ಯ ಸೇವೆ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ನಾವು ಕಠಿಣ ಪರಿಶ್ರಮ ಹಾಕಿದ್ದೇವೆ. ನೀವು ಬೇರೆ ಪಕ್ಷಕ್ಕೆ ಮತ ಹಾಕಿದರೆ ಶಿಕ್ಷಣ ಹಾಗೂ ಆರೋಗ್ಯ ಸೇವೆ ಕೆಡಲಿದೆ. ಕಳೆದ ಐದು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಸರ್ಕಾರ ಕೈಗೆತ್ತಿಕೊಂಡಿದ್ದು, ಕಳೆದ 70 ವರ್ಷದಿಂದ ಬಾಕಿ ಉಳಿದಿರುವ ಕೆಲಸಗಳನ್ನು ಪೂರ್ಣಗೊಳಿಸಲು ಮತ್ತಷ್ಟು ಸಮಯಾವಕಾಶ ಬೇಕಾಗಿದೆ’ ಎಂದರು.